O2 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

PRK ಪ್ರೊಡಕ್ಷನ್ಸ್ ನಿರ್ಮಾಣದ 'O2' ಬಿಡುಗಡೆಗೆ ಸಿದ್ಧ; ಏಪ್ರಿಲ್‌ನಲ್ಲಿ ರಾಜ್ಯದಾದ್ಯಂತ ತೆರೆಗೆ

ಈ ಹಿಂದೆ ಕವಲುದಾರಿ ಮತ್ತು ಫ್ರೆಂಚ್ ಬಿರಿಯಾನಿಯಂತಹ ಚಲನಚಿತ್ರಗಳನ್ನು ನಿರ್ಮಿಸಿದ PRK ಪ್ರೊಡಕ್ಷನ್ಸ್, ತನ್ನ ಆರನೇ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ವೈದ್ಯಕೀಯ ಥ್ರಿಲ್ಲರ್ ಎಂದೇ ಬಿಂಬಿಸಲಾದ 'O2' ಚಿತ್ರದಲ್ಲಿ ನಟಿ ಆಶಿಕಾ ರಂಗನಾಥ್ ಮತ್ತು ಪ್ರವೀಣ್ ತೇಜ್ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಈ ಹಿಂದೆ ಕವಲುದಾರಿ ಮತ್ತು ಫ್ರೆಂಚ್ ಬಿರಿಯಾನಿಯಂತಹ ಚಲನಚಿತ್ರಗಳನ್ನು ನಿರ್ಮಿಸಿದ PRK ಪ್ರೊಡಕ್ಷನ್ಸ್, ತನ್ನ ಆರನೇ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ವೈದ್ಯಕೀಯ ಥ್ರಿಲ್ಲರ್ ಎಂದೇ ಬಿಂಬಿಸಲಾದ 'O2' ಚಿತ್ರದಲ್ಲಿ ನಟಿ ಆಶಿಕಾ ರಂಗನಾಥ್ ಮತ್ತು ಪ್ರವೀಣ್ ತೇಜ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರವು ಏಪ್ರಿಲ್ 19 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರತಂಡ ಇತ್ತೀಚೆಗಷ್ಟೇ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ಚಿತ್ರದ ಟೀಸರ್ ಬಿಡುಗಡೆ ಮಾಡಿದೆ.

'O2' ಸಿನಿಮಾಗೆ ಪ್ರಶಾಂತ್ ರಾಜ್ ಮತ್ತು ರಾಘವ್ ನಾಯಕ್ ಕಥೆ ಬರೆದಿದ್ದು, ನಿರ್ದೇಶಿಸಿದ್ದಾರೆ. ಚಿತ್ರವು ನೈತಿಕ ಸಂದಿಗ್ಧತೆಗಳು, ನಿಷೇಧಿತ ಪ್ರಯೋಗಗಳು ಮತ್ತು ಮರಣವನ್ನು ಧಿಕ್ಕರಿಸುವ ಪಟ್ಟುಬಿಡದ ಅನ್ವೇಷಣೆಯನ್ನು ಪರಿಶೀಲಿಸುತ್ತದೆ. ಟೀಸರ್ ಪ್ರೀತಿ, ನೈತಿಕತೆ ಮತ್ತು ಹಣೆಬರಹದ ಜಾಲದಲ್ಲಿ ಸಿಕ್ಕಿಹಾಕಿಕೊಂಡಿರುವ ವೈದ್ಯರ ಅಪಾಯಕಾರಿ ಪ್ರಯಾಣದ ಸುತ್ತ ಕೇಂದ್ರೀಕೃತವಾಗಿದೆ.

ನಿರ್ದೇಶಕರಲ್ಲಿ ಒಬ್ಬರಾದ ರಾಘವ್ ನಾಯಕ್ ಮಾತನಾಡಿ, 'ನಾನು ಕೇವಲ ಸಿನಿಮಾದ ವಿದ್ಯಾರ್ಥಿಯಲ್ಲ. ಬದಲಿಗೆ ನಾನು ಅದನ್ನು ಉಸಿರಾಡುತ್ತೇನೆ. ಚಿತ್ರೀಕರಣದ ಪ್ರಕ್ರಿಯೆಯಲ್ಲಿ ಸಂಭವಿಸಿದ ಹಲವು ಅಡೆತಡೆಗಳ ಹೊರತಾಗಿಯೂ, ಈ ಚಿತ್ರ ನಿರ್ಮಾಣಕ್ಕೆ ಪುನೀತ್ ರಾಜ್‌ಕುಮಾರ್ ಅವರ ಅಚಲ ಬೆಂಬಲವೇ ಕಾರಣ. ಈ ಸಿನಿಮಾದ ಮೇಲೆ ಅವರಿಟ್ಟಿದ್ದ ನಂಬಿಕೆಯೇ ನಮಗೆ ಮಾರ್ಗದರ್ಶನದ ಬೆಳಕಿನಂತೆ ಕಾರ್ಯನಿರ್ವಹಿಸಿತು' ಎಂದರು.

'PRK ಪ್ರೊಡಕ್ಷನ್ಸ್ ಕೇವಲ ಒಂದು ಕಂಪನಿ ಅಲ್ಲ. ಇದು ಒಂದು ಕುಟುಂಬ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ನಾಯಕತ್ವ, ಕಾರ್ಯನಿರ್ವಾಹಕ ನಿರ್ಮಾಪಕರಾದ ಸತೀಶ್ ಮತ್ತು ಸ್ವಾಮಿ ಅವರ ಬೆಂಬಲದೊಂದಿಗೆ O2 ಸಿನಿಮಾವನ್ನು ತಯಾರಿಸಲಾಗಿದೆ. ಈ ಬೇಸಿಗೆಯಲ್ಲಿ ನಮ್ಮ ಚಿತ್ರವನ್ನು ಪ್ರೇಕ್ಷಕರಿಗೆ ತೋರಿಸಲು ನಾವು ಕಾತರದಿಂದ ಕಾಯುತ್ತಿದ್ದೇವೆ ಎಂದರು.

O2 ನಲ್ಲಿ ಸಿರಿ ರವಿಕುಮಾರ್, ಪುನೀತ್ ಬಿಎ, ಪ್ರಕಾಶ್ ಬೆಳವಾಡಿ, ಶ್ರೀಧರ್, ಗೋಪಾಲ್ ಕೃಷ್ಣ ದೇಶಪಾಂಡೆ ಮತ್ತು ರಂಗಭೂಮಿ ಕಲಾವಿದ ಮೋಹನ್ ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಅವರ ಛಾಯಾಗ್ರಹಣವಿದ್ದು, ವಿವನ್ ರಾಧಾಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT