ಯುವ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ರಾಜ್ಯದಾದ್ಯಂತ 350ಕ್ಕೂ ಹೆಚ್ಚು ತೆರೆಗಳಲ್ಲಿ ಅಬ್ಬರಿಸಲು 'ಯುವ' ಸಿನಿಮಾ ಸಜ್ಜು!

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರ ಬಹುನಿರೀಕ್ಷಿತ 'ಯುವ' ಚಿತ್ರವು ಮಾರ್ಚ್ 29ರಂದು ತೆರೆಗೆ ಬರಲು ಸಜ್ಜಾಗಿದ್ದು, ವ್ಯಾಪಕ ನಿರೀಕ್ಷೆ ಹುಟ್ಟುಹಾಕಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಘೋಷಿಸಿದೆ. ಸಿಂಗಲ್ ಸ್ಕ್ರೀನ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ 350ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಸಜ್ಜಾಗಿದೆ.

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರ ಬಹುನಿರೀಕ್ಷಿತ 'ಯುವ' ಚಿತ್ರವು ಮಾರ್ಚ್ 29ರಂದು ತೆರೆಗೆ ಬರಲು ಸಜ್ಜಾಗಿದ್ದು, ವ್ಯಾಪಕ ನಿರೀಕ್ಷೆ ಹುಟ್ಟುಹಾಕಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಘೋಷಿಸಿದೆ.

ಸಂತೋಷ್ ಆನಂದ್‌ರಾಮ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಚಿತ್ರವು ಕರ್ನಾಟಕದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗುತ್ತಿದೆ. ಸಿಂಗಲ್ ಸ್ಕ್ರೀನ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ 350ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಸಜ್ಜಾಗಿದೆ. ಯುವ ಚಿತ್ರಮಂದಿರಗಳಲ್ಲಿನ ತನ್ನ ಓಟದ ನಂತರ ಬಹು ಭಾಷೆಗಳಲ್ಲಿ OTT ವೇದಿಕೆಗಳಲ್ಲಿ ಬಿಡುಗಡೆಯಾಗಲಿದೆ.

ಯುವ ಚಿತ್ರದ ಕಥಾಹಂದರವು ಕಾಲೇಜು ಮತ್ತು ಕ್ರೀಡೆಗಳ ಹಿನ್ನೆಲೆಯಲ್ಲಿ ಯುವಕನ ಜೀವನದ ಸುತ್ತ ಸುತ್ತುತ್ತದೆ. ಯುವ ರಾಜ್‌ಕುಮಾರ್ ಅವರು ಫುಡ್ ಡೆಲಿವರಿ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ತಂದೆ-ಮಗನ ಸಂಬಂಧದ ಜಟಿಲತೆಗಳನ್ನು ಸಹ ಒಳಗೊಂಡಿದೆ. ಡ್ರಾಮಾ, ಎಮೋಷನ್ಸ್ ಮತ್ತು ಎಂಟರ್‌ಟೈನ್‌ಮೆಂಟ್ ಮಿಶ್ರಣದ ಭರವಸೆ ನೀಡುತ್ತದೆ.

ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅವರು ಯುವ ರಾಜ್‌ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಮತ್ತು ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣವಿದೆ. ಇನ್ನುಳಿದಂತೆ ಚಿತ್ರದಲ್ಲಿ ಅಚ್ಯುತ್ ಕುಮಾರ್, ಕಿಶೋರ್ ಮತ್ತು ಹಿತಾ ಚಂದ್ರಶೇಖರ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT