ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ತಂಡ 
ಸಿನಿಮಾ ಸುದ್ದಿ

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ​ ಮುಗಿಸಿದ ಚಂದನ್ ಶೆಟ್ಟಿ

ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.

ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ.

ಚಿತ್ರೀಕರಣ ಕುರಿತು ಮಾಹಿತಿ ನೀಡಿದ ನಿರ್ದೇಶಕ ಅರುಣ್ ಅಮುಕ್ತ ಅವರು, ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಮಂಗಳೂರು ಮುಂತಾದ ಕಡೆಗಳಲ್ಲಿ 50 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಇದೀಗ ಚಿತ್ರ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಸದ್ಯಕ್ಕೆ ಎಲ್ಲೆಲ್ಲೂ ರಾಜಕೀಯದ ಕಾವು ಇದೆ. ಹಾಗಾಗಿ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟ ಆದ ಬಳಿಕ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ರ್ಯಾಪರ್ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರ ದ್ದು ಭಿನ್ನ ಶೇಡುಗಳನ್ನು ಹೊಂದಿರುವ ಪಾತ್ರವಾಗಿದೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳು ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳಾಗಿವೆ. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿ ಪರಿಣಮಿಸಿತ್ತು. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ್ದಾರೆಂದು ತಿಳಿಸಿದರು.

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT