ಜಸ್ಟ್ ಮ್ಯಾರೀಡ್ ಚಿತ್ರತಂಡ 
ಸಿನಿಮಾ ಸುದ್ದಿ

'ಜಸ್ಟ್ ಮ್ಯಾರೀಡ್' ಚಿತ್ರದಲ್ಲಿ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಜಾಹೀರಾತು ನಿರ್ದೇಶಕನ ಪಾತ್ರ!

ಜಸ್ಟ್ ಮ್ಯಾರೀಡ್‌ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸಿಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಅಲ್ಲದೆ, ಸಹ-ನಿರ್ಮಾಣವನ್ನು ಮಾಡುತ್ತಿದ್ದಾರೆ. ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಜಾಹೀರಾತು ನಿರ್ದೇಶಕ ಸೂರ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಜಸ್ಟ್ ಮ್ಯಾರೀಡ್‌ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸಿಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಅಲ್ಲದೆ, ಸಹ-ನಿರ್ಮಾಣವನ್ನು ಮಾಡುತ್ತಿದ್ದಾರೆ.

ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿಯ ಪಾತ್ರದ ಬಗ್ಗೆ ಚಿತ್ರತಂಡ ಮಹತ್ವದ ಮಾಹಿತಿ ನೀಡಿದೆ. ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಜಾಹೀರಾತು ನಿರ್ದೇಶಕ ಸೂರ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ಶೈನ್ ಶೆಟ್ಟಿ ಅವರ ಸೂರ್ಯ ಪಾತ್ರದ ಪ್ರಾಮುಖ್ಯತೆಯನ್ನು ಹೆಚ್ಚಿಸಲು ನಿರ್ದೇಶಕಿ ಬಾಬಿ ಅವರು ಆಸಕ್ತಿದಾಯಕ ತಾರಾಗಣವನ್ನು ಆಯ್ಕೆ ಮಾಡಿದ್ದಾರೆ. ಗೋವಾದ ಮಾಡೆಲ್‌ಗಳಾದ ಅರ್ಹನಾ ಮತ್ತು ಲುವಾನಾ ಅವರನ್ನು ಚಿತ್ರದ ಕೆಲವು ಪಾತ್ರಗಳಿಗೆ ಹಾಕಲು ಬಾಬಿ ನಿರ್ಧರಿಸಿದ್ದಾರೆ. ತಮ್ಮ ಸಿಬ್ಬಂದಿಯಲ್ಲಿ ಒಬ್ಬರಾದ, ವೃತ್ತಿಪರ ನಟರಲ್ಲದ ಜನರೇಟರ್ ಆಪರೇಟರ್ ಗುರು ಮಲ್ಲಪ್ಪ ಅವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಶೈನ್ ಶೆಟ್ಟಿ ಅವರಿಗೆ ಜೋಡಿಯಾಗಿ ಅಂಕಿತಾ ಅಮರ್ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ದೇವರಾಜ್, ಶ್ರುತಿ ಕೃಷ್ಣ, ನಿರ್ದೇಶಕ-ನಟ ಅನೂಪ್ ಭಂಡಾರಿ, ಸಾಕ್ಷಿ ಅಗರ್ವಾಲ್, ಶ್ರುತಿ ಹರಿಹರನ್, ಅಚ್ಯುತ್ ಕುಮಾರ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಪಾರ್ತಿಬನ್ ಜಿ ಅವರ ಛಾಯಾಗ್ರಹಣ, ಅಮರ್ ಅವರ ಕಲಾ ನಿರ್ದೇಶನ ಮತ್ತು ಅಜನೀಶ್ ಅವರ ಸಂಗೀತ ಸಂಯೋಜನೆಯಿದೆ. ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT