ನಟಿ ರಶ್ಮಿಗೌತಮ್ 
ಸಿನಿಮಾ ಸುದ್ದಿ

Prajwal Revanna Sex Scandal: “ಮಹಿಳೆ ಹಸಿದಾಗ ಬಾಯಿಗೆ ಅನ್ನ ಕೊಡಿ, **** ಅಲ್ಲ”: ಪ್ರಜ್ವಲ್​​​​​ ರೇವಣ್ಣ ವಿರುದ್ಧ ತೆಲುಗು ನಟಿ ರಶ್ಮಿ ಗೌತಮ್ ಕಿಡಿ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದ್ದು, ನಟಿ ಪೂನಂಕೌರ್, ನಟಿ ಚಿನ್ಮಯ್ ಬೆನ್ನಲ್ಲೇ ಇದೀಗ ತೆಲುಗು ನಟಿ ಮತ್ತು ನಿರೂಪಕಿ ರಶ್ಮಿ ಗೌತಮ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದ್ದು, ನಟಿ ಪೂನಂಕೌರ್, ನಟಿ ಚಿನ್ಮಯ್ ಬೆನ್ನಲ್ಲೇ ಇದೀಗ ತೆಲುಗು ನಟಿ ಮತ್ತು ನಿರೂಪಕಿ ರಶ್ಮಿ ಗೌತಮ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ನಟಿ ರಶ್ಮಿ ಗೌತಮ್, ಖ್ಯಾತ ಬ್ರಿಟನ್​​​ ಲೇಖಕಿ ರಾಷೆಲ್ ​​ಮೊರಾನ್ ಅವರ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸೆಕ್ಸ್ ಹಗರಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ನಲ್ಲಿ “ಮಹಿಳೆ ಹಸಿದಾಗ ಬಾಯಿಗೆ ಅನ್ನ ಕೊಡಿ, ಅದನ್ನಲ್ಲ” ಎಂದು ಖ್ಯಾತ ಬ್ರಿಟನ್​​​ ಲೇಖಕಿ ರಾಷೆಲ್ ​​ಮೊರಾನ್ ಅವರ ಸಂದೇಶವನ್ನು ರಶ್ಮಿ ಗೌತಮ್ ಹಂಚಿಕೊಂಡಿದ್ದಾರೆ.

ನಿನ್ನೆಯಷ್ಟೇ ನಟಿ ಪೂನಂಕೌರ್ ಇದೇ ವಿಚಾರವಾಗಿ ಲೈವ್ ನಲ್ಲಿ ಮಾತನಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು; ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ. ಅಂಕಿತಾ ಭಂಡಾರಿ ಹೆಸರಿನ ಯುವತಿಯನ್ನು ಮಿನಿಸ್ಟರೊಬ್ಬನ ಮಗ ಬೆಟ್ಟದ ಮೇಲಿಂದ ತಳ್ಳಿ ಹತ್ಯೆ ಮಾಡುತ್ತಾನೆ, ಮತ್ತೊಬ್ಬ ಮಿನಿಸ್ಟರ್ ಮಗ ಬ್ಲ್ಯಾಕ್ ಮೇಲ್ ಮಾಡುತ್ತಾನೆ ಎಂದು ತಮ್ಮ ಮಾತು ಆರಂಭಿಸುವ ಪೂನಂ, ಪ್ರಜ್ವಲ್ ರೇವಣ್ಣನ (Prajwal Revanna) ಬಗ್ಗೆ ಹೇಳುತ್ತಾರೆ.

ಪ್ರಜ್ವಲ್ ನನ್ನು ಒಬ್ಬ ಮಿನಿಸ್ಟರ್ ಮಗ ಎಂದು ಹೇಳುವ ಪೂನಂ (ಅವರಿಗೆ ಪ್ರಜ್ವಲ್ ರೇವಣ್ಣ ಒಬ್ಬ ಸಂಸದ ಮತ್ತು ಮಾಜಿ ಪ್ರಧಾನಿಯೊಬ್ಬರ ಮೊಮ್ಮಗ ಅನ್ನೋದು ಗೊತ್ತಿಲ್ಲ ಅನಿಸುತ್ತೆ) ಅವನೊಬ್ಬ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ, 2,800 ಕ್ಕೂ ಹೆಚ್ಚು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT