ಸಿನಿಮಾ ಸುದ್ದಿ

ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಹೊಸ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿ ರಾಗಿಣಿ ದ್ವಿವೇದಿ!

ಜಟ್ಟ ಮತ್ತು ಮೈತ್ರಿಯಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಬಿಎಂ ಗಿರಿರಾಜ್ ಸದ್ಯ ಗುರುದೇಶಪಾಂಡೆಯವರ ಜಿ ಸಿನಿಮಾಸ್ ಮೂಲಕ 'ರಾಮರಸ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಮಧ್ಯೆ, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಈಗಾಗಲೇ ತಮ್ಮ ಮುಂದಿನ ಯೋಜನೆಗೆ ಸಜ್ಜಾಗುತ್ತಿದ್ದಾರೆ.

ಜಟ್ಟ ಮತ್ತು ಮೈತ್ರಿಯಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಬಿಎಂ ಗಿರಿರಾಜ್ ಸದ್ಯ ಗುರುದೇಶಪಾಂಡೆಯವರ ಜಿ ಸಿನಿಮಾಸ್ ಮೂಲಕ 'ರಾಮರಸ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಮಧ್ಯೆ, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಈಗಾಗಲೇ ತಮ್ಮ ಮುಂದಿನ ಯೋಜನೆಗೆ ಸಜ್ಜಾಗುತ್ತಿದ್ದಾರೆ.

ಸೈಕಲಾಜಿಕಲ್ ಥ್ರಿಲ್ಲರ್ ಆಗಿರುವ ಈ ಚಿತ್ರಕ್ಕೆ ರಾಗಿಣಿ ದ್ವಿವೇದಿ ನಾಯಕಿಯಾಗಿದ್ದಾರೆ ಎಂದು ಭಾನುವಾರ ಚಿತ್ರತಂಡ ಘೋಷಿಸಿದೆ. ಮೇ 24 ರಂದು ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ತಾರಾಗಣ, ಕಥಾವಸ್ತು ಮತ್ತು ಫಸ್ಟ್ ಲುಕ್ ಪೋಸ್ಟರ್‌ಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದಿದೆ. ರಾಮಕೃಷ್ಣ ನಿಗಡೆ ಹೊಂಬಣ್ಣ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಗಿರೀಶ್ ಗೌಡ ಅವರ ಮೇಲ್ವಿಚಾರಣೆ ನಡೆಸಲಿದ್ದಾರೆ.

ರಾಗಿಣಿ ದ್ವಿವೇದಿ ಅವರು ಚಿತ್ರದ ಭಾಗವಾಗಿರುವ ಕುರಿತು ಚಿತ್ರತಂಡ ಘೋಷಿಸಿದ್ದರೂ, ಇನ್ನುಳಿದ ತಾರಾಗಣವನ್ನು ಅಂತಿಮಗೊಳಿಸಿಲ್ಲ. ಈಮಧ್ಯೆ, ಈ ಹಿಂದೆ ಗಿರಿರಾಜ್ ಅವರೊಂದಿಗೆ ಕಾರ್ಪೊರೇಟ್ ಮತ್ತು ಕಮರ್ಷಿಯಲ್ ಜಾಹೀರಾತುಗಳಲ್ಲಿ ಕೆಲಸ ಮಾಡಿದ್ದ ರಂಗಸ್ವಾಮಿ ಈ ಯೋಜನೆಗೆ ಛಾಯಾಗ್ರಾಹಕರಾಗಿ ಪದಾರ್ಪಣೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

SCROLL FOR NEXT