ಆ್ಯನಿಮೇಟೆಡ್ ಬಾಹುಬಲಿ ಸ್ಟಿಲ್ 
ಸಿನಿಮಾ ಸುದ್ದಿ

ಅನಿಮೇಟೆಡ್ 'ಬಾಹುಬಲಿ' ಬಿಡುಗಡೆಗೆ ಸಿದ್ಧ; ಒಂದು ಅದ್ಬುತ ಅನುಭವ ಎಂದ ರಾಜಮೌಳಿ

ನಾವು ಬಹುಬಲಿ ಜಗತ್ತನ್ನು ವಿಸ್ತರಿಸುವ ಕಥೆಯನ್ನು ರಚಿಸಿದ್ದೇವೆ. ಮಾಹಿಷ್ಮತಿಯ ಯೋಧರು ತಮ್ಮ ತಾಯ್ನಾಡನ್ನು ಉಳಿಸಲು ಒಂದಾದಾಗ ಸಾಮ್ರಾಜ್ಯಗಳ ನಡುವೆ ಮಹಾ ಘರ್ಷಣೆ ಉಂಟಾಗುವುದನ್ನು ಇದರಲ್ಲಿ ವೀಕ್ಷಿಸಬಹುದು ಎಂದು ನಿರ್ದೇಶಕ ರಾಜಮೌಳಿ ತಿಳಿಸಿದರು.

ಹೈದರಾಬಾದ್: 'ಬಾಹುಬಲಿ' ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್‌ ನಲ್ಲಿ ತೆರೆಗೆ ಬರಲು ಸಿದ್ಧವಾಗಿದ್ದು, ಈ ವಿಷಯವನ್ನು ಸ್ವತಃ ನಿರ್ದೇಶಕ ರಾಜಮೌಳಿ ಹಂಚಿಕೊಂಡಿದ್ದಾರೆ.

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಬಾಹುಬಲಿ ಕ್ರೌನ್ ಆಫ್ ಬ್ಲಡ್ ನಿರ್ಮಾಣವಾಗಿದ್ದು, ನಿರ್ದೇಶಕ ಎಸ್.ಎಸ್.ರಾಜಮೌಳಿ-ಶರದ್‌ ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿರುವ ಈ ಯೋಜನೆಗೆ ಜೀವನ್.ಜೆ.ಕಾಂಗ್-ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ.

ಈ ವಿಷಯವನ್ನು ಹಂಚಿಕೊಂಡು ಮಾತನಾಡಿದ ರಾಜಮೌಳಿ, ನಾವು ಬಹುಬಲಿ ಜಗತ್ತನ್ನು ವಿಸ್ತರಿಸುವ ಕಥೆಯನ್ನು ರಚಿಸಿದ್ದೇವೆ. ಮಾಹಿಷ್ಮತಿಯ ಯೋಧರು ತಮ್ಮ ತಾಯ್ನಾಡನ್ನು ಉಳಿಸಲು ಒಂದಾದಾಗ ಸಾಮ್ರಾಜ್ಯಗಳ ನಡುವೆ ಮಹಾ ಘರ್ಷಣೆ ಉಂಟಾಗುವುದನ್ನು ಇದರಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದರು.

ತಂಡದೊಂದಿಗೆ ಎಸ್.ಎಸ್.ರಾಜಮೌಳಿ

ಬಾಹುಬಲಿಯನ್ನು ಸೃಷ್ಟಿಸಿದ ಹೈದರಾಬಾದ್, ಎಂದಿಗೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಭಾರತದಲ್ಲಿ ಹಳೆಯ ಕಾಲದ ಅನಿಮೇಷನ್ ಚಿತ್ರ ನಿರ್ಮಾಣಕ್ಕೆ ಇವರೆಲ್ಲರ ಉತ್ಸಾಹ ಸಮರ್ಪಣೆಗಳೇ ಸ್ಪೂರ್ತಿಯಾಗಿದೆ ಎಂದು ರಾಜಮೌಳಿ ತಿಳಿಸಿದರು.

ಈ ಸಂದರ್ಭದಲ್ಲಿ ಬರಹಗಾರ ಮತ್ತು ನಿರ್ಮಾಪಕ ಶರದ್‌ ದೇವರಾಜನ್, ಡಿಸ್ನಿ ಹಾಟ್‌ಸ್ಟಾರ್, ಹೆಚ್‌ಎಸ್‌ಎಂ ಎಂಟರ್‌ಟೈನ್‌ಮೆಂಟ್ ಮುಖ್ಯಸ್ಥ ಗೌರವ್ ಬ್ಯಾನರ್ಜಿ, ನಟ ಹಾಗೂ ಅನಿಮೇಟೆಡ್‌ಗೆ ಧ್ವನಿ ನೀಡಿರುವ ಶರದ್‌ಕೇಳ್ಕರ್ ಉಪಸ್ತಿತರಿದ್ದು, ತಂತಮ್ಮ ಅನುಭವಗಳನ್ನು ಹಂಚಿಕೊಂಡರು. ಅನಿಮೇಟೆಡ್‌ದಲ್ಲಿ ಸಾಹಸ, ರಾಜಕೀಯ ಅಚ್ಚರಿಗಳು, ನಾಟಕ, ಮೋಸ, ಯುದ್ದ, ಹೀರೋಗಿರಿ, ವಿಶ್ವಾಸ, ಧೈರ್ಯ ಎಲ್ಲ ಅಂಶಗಳು ಸೇರಿಕೊಂಡಿದೆ.

ಇಂತಹ ಪವರ್ ಪ್ಯಾಕ್ಡ್ ಆಕ್ಷನ್ ಸೀರೀಸ್ ಕನ್ನಡ ಸೇರಿದಂತೆ, ಎಲ್ಲಾ ಭಾಷೆಗಳಲ್ಲಿ ಮೇ 17,2024ರಿಂದ ಡಿಸ್ನಿ+ಹಾಟ್‌ಸ್ಟಾರ್‌ದಲ್ಲಿ ಸ್ಟ್ರೀಮ್ ಆಗಲು ಸಜ್ಜಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT