ಸಂತೋಷ್ ಬಾಲರಾಜ್ 
ಸಿನಿಮಾ ಸುದ್ದಿ

ಸಂತೋಷ್ ಬಾಲರಾಜ್ ನಟನೆಯ, ಭೂತಾರಾಧನೆಯ ಕಥೆಯುಳ್ಳ 'ಸತ್ಯಂ' ಚಿತ್ರಕ್ಕೆ U/A ಪ್ರಮಾಣಪತ್ರ

'ಕೆಂಪ', 'ಕರಿಯ‌ 2' ಹಾಗೂ 'ಗಣಪ' ಚಿತ್ರಗಳಿಗೆ ಹೆಸರಾದ ನಟ ಸಂತೋಷ್ ಬಾಲರಾಜ್ ಮತ್ತು ರಂಜನಿ ರಾಘವನ್ ನಟನೆಯ, ಅಶೋಕ ಕಡಬ ನಿರ್ದೇಶನದ 'ಸತ್ಯಂ' ಚಿತ್ರ ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಈ ಚಿತ್ರವು ತುಳುನಾಡು ಪ್ರದೇಶದಲ್ಲಿ ಪ್ರಸಿದ್ಧವಾಗಿರುವ ಪಂಜುರ್ಲಿ ದೈವದ ಸುತ್ತ ಚಿತ್ರ ಕೇಂದ್ರೀಕೃತವಾಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ.

'ಕೆಂಪ', 'ಕರಿಯ‌ 2' ಹಾಗೂ 'ಗಣಪ' ಚಿತ್ರಗಳಿಗೆ ಹೆಸರಾದ ನಟ ಸಂತೋಷ್ ಬಾಲರಾಜ್ ಮತ್ತು ರಂಜನಿ ರಾಘವನ್ ನಟನೆಯ, ಅಶೋಕ ಕಡಬ ನಿರ್ದೇಶನದ 'ಸತ್ಯಂ' ಚಿತ್ರ ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಈ ಚಿತ್ರವು ತುಳುನಾಡು ಪ್ರದೇಶದಲ್ಲಿ ಪ್ರಸಿದ್ಧವಾಗಿರುವ ಪಂಜುರ್ಲಿ ದೈವದ ಸುತ್ತ ಚಿತ್ರ ಕೇಂದ್ರೀಕೃತವಾಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ.

ಚಿತ್ರತಂಡ ಈಗ ಬಿಡುಗಡೆಗೆ ತಯಾರಿ ನಡೆಸುತ್ತಿದ್ದು, ಕೆಎ ಸುರೇಶ್ ಚಿತ್ರದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ. ಅಶೋಕ ಕಡಬ ಅವರು ಏನಂತಿಯಾ ಮತ್ತು ಮೈ ನೇಮ್ ಈಸ್ ಕಲಾಂ ಮತ್ತು ಮೈಥಿಲಿಯಂತಹ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದಾರೆ. ಸತ್ಯಂ ಅನ್ನು ಕಮರ್ಷಿಯಲ್ ಅಂಶಗಳೊಂದಿಗೆ ಕಂಟೆಂಟ್ ಆಧರಿತ ಕಥೆಯನ್ನು ಹೊಂದಿದೆ ಎಂದು ವಿವರಿಸುತ್ತಾರೆ.

ಚಿತ್ರದಲ್ಲಿ ಸುಮನ್, ಸಯಾಜಿ ಶಿಂಧೆ, ಪವಿತ್ರಾ ಲೋಕೇಶ್, ಅವಿನಾಶ್ ಮತ್ತು ಮುಖ್ಯಮಂತ್ರಿ ಚಂದ್ರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರ್ ಅವರ ಸಂಗೀತ, ಸಿನೆಟೆಕ್ ಸೂರಿ ಅವರ ಛಾಯಾಗ್ರಹಣವಿದೆ. ಮಹಾಂತೇಶ್ ವಿಕೆ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಸತ್ಯಂ ಚಿತ್ರವು ಅಜ್ಜ ಮತ್ತು ಮೊಮ್ಮಗನ ನಡುವಿನ ಬಾಂಧವ್ಯವನ್ನು ಕೇಂದ್ರೀಕರಿಸುವ ಮೂಲಕ ಸಾಂಪ್ರದಾಯಿಕ ಕುಟುಂಬ ವ್ಯವಸ್ಥೆಯಲ್ಲಿ ಎರಡು ತಲೆಮಾರುಗಳ ಕಥೆಯನ್ನು ಹೇಳುತ್ತದೆ. ನಾಲ್ಕು ದಶಕಗಳ ನಂತರ ಕುಟುಂಬದ ಮುಖ್ಯಸ್ಥ ಹಳ್ಳಿಗೆ ಹಿಂದಿರುಗಿದಾಗ ಸಂಭವಿಸುವ ಘಟನೆಗಳನ್ನು ತೋರಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT