ರಣಹದ್ದು ಸಿನಿಮಾದ ಪೋಸ್ಟರ್ 
ಸಿನಿಮಾ ಸುದ್ದಿ

ಜಂಗ್ಲಿ ಪ್ರಸನ್ನಕುಮಾರ್ ನಿರ್ದೇಶನದ 'ರಣಹದ್ದು' ಬಿಡುಗಡೆಗೆ ದಿನಾಂಕ ನಿಗದಿ

ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಜಂಗ್ಲಿ ಪ್ರಸನ್ನಕುಮಾರ್ ಎಂದೇ ಖ್ಯಾತರಾಗಿರುವ ಪ್ರಸನ್ನಕುಮಾರ್ ಅವರು 'ರಣ ಹದ್ದು' ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ಚಿತ್ರತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಜಂಗ್ಲಿ ಪ್ರಸನ್ನಕುಮಾರ್ ಎಂದೇ ಖ್ಯಾತರಾಗಿರುವ ಪ್ರಸನ್ನಕುಮಾರ್ ಅವರು 'ರಣ ಹದ್ದು' ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಕುತೂಹಲಕಾರಿಯಾಗಿ, ಪ್ರಸನ್ನಕುಮಾರ್ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಚಿತ್ರರಂಗ ಪ್ರವೇಶಿಸಲಿದ್ದಾರೆ.

ಚಿತ್ರತಂಡ ಇತ್ತೀಚೆಗಷ್ಟೇ ಹಾಡನ್ನು ಬಿಡುಗಡೆ ಮಾಡಿದ್ದು, ಮೇ 17 ರಂದು ರಾಜ್ಯದಾದ್ಯಂತ ಚಿತ್ರ ಬಿಡುಗಡೆಯಾಗಲಿದೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಚಿತ್ರರಂಗವು ತನಗೆ ಜೀವನವನ್ನು ರೂಪಿಸಿಕೊಟ್ಟಿದೆ. ಇದಕ್ಕಾಗಿ ತಾವು ಮತ್ತು ತಮ್ಮ ಕುಟುಂಬ ತುಂಬಾ ಋಣಿಯಾಗಿದ್ದೇವೇ ಎಂದು ಹೇಳಿದರು.

'ಕೆಲವು ವರ್ಷಗಳ ಹಿಂದೆ, ನಾನು ತೀವ್ರವಾದ ಗಾಯವನ್ನು ಅನುಭವಿಸಿದೆ. ಆ ಸಮಯದಲ್ಲಿ, ನಾನು ಬಹಳಷ್ಟು ಯೋಚಿಸಿದೆ. ಕೆಲವು ದಿನಗಳ ನಂತರ, ನಾನು ನಿರ್ಮಾಣದ ಜೊತೆಗೆ ಚಿತ್ರ ನಿರ್ದೇಶಿಸುವ ಬಯಕೆಯನ್ನು ಬೆಳೆಸಿಕೊಂಡೆ. ನನ್ನ ಆಸೆಗೆ ನನ್ನ ಮಕ್ಕಳು ಒತ್ತಾಸೆಯಾದರು. 'ರಣಹದ್ದು' ಮೂಲಕ ನನ್ನ ಮಕ್ಕಳಿಬ್ಬರೂ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ' ಎಂದು ಹೇಳುತ್ತಾರೆ ಪ್ರಸನ್ನಕುಮಾರ್.

'ಹಣವಿಲ್ಲದ ವ್ಯಕ್ತಿಯನ್ನು ಸಮಾಜ ಹೇಗೆ ನೋಡುತ್ತದೆ ಎಂಬುದು ಚಿತ್ರದ ಕಥೆ. ಅದೂ ಅಲ್ಲದೆ ಪ್ರೇಕ್ಷಕರಿಗೆ ಬೇಕಾದ ಎಲ್ಲ ಅಂಶಗಳೂ ಈ ಚಿತ್ರದಲ್ಲಿವೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯ ಬಿಡುಗಡೆ ಹಂತದಲ್ಲಿದೆ' ಎಂದರು.

'ರಣಹದ್ದು' ಚಿತ್ರಕ್ಕೆ ಗಾಯಕ ಶ್ರೀನಿವಾಸ್ ಸಂಗೀತ ಸಂಯೋಜಿಸಿದ್ದು, ಗಿರಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT