ಛಾಯಾಸಿಂಗ್ 
ಸಿನಿಮಾ ಸುದ್ದಿ

ಬೆಂಗಳೂರು: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಕೆಲಸದಾಕೆ ಬಂಧನ, ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಛಾಯಾ ಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT