ಛಾಯಾಸಿಂಗ್ 
ಸಿನಿಮಾ ಸುದ್ದಿ

ಬೆಂಗಳೂರು: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಕೆಲಸದಾಕೆ ಬಂಧನ, ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಛಾಯಾ ಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT