ಚಂದ್ರಕಾಂತ್ ಪತ್ನಿ ಶಿಲ್ಪಾ 
ಸಿನಿಮಾ ಸುದ್ದಿ

ಪವಿತ್ರಾ-ಚಂದ್ರು ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದರು, ಆಕೆ ಬಂದ ಮೇಲೆ ನನ್ನ ಜೀವನ ಹಾಳಾಯ್ತು: ಚಂದ್ರಕಾಂತ್ ಪತ್ನಿ!

ಚಂದು ಹಾಗೂ ಪವಿತ್ರಾ ಅವರ ಸ್ನೇಹ ಬರೀ ಸ್ನೇಹವಾಗಿಲ್ಲ. ಅವರಿಬ್ಬರು ತುಂಬಾ ಆತ್ಮೀಯರಾಗಿದ್ದರು. ಇಬ್ಬರು ಗಂಡ – ಹೆಂಡತಿಯಂತೆ ಇದ್ದರು ಎಂದು ಚಂದು ಪತ್ನಿ ಶಿಲ್ಪಾ ತಿಳಿಸಿದ್ದಾರೆ

ನಟಿ ಪವಿತ್ರಾ ಜಯರಾಂ ಅವರು ನಿಧನ ಹೊಂದಿದ ಬೆನ್ನಲ್ಲೇ ಅವರ ಗೆಳೆಯ ಚಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಮ್ಮ ಪತಿ ಸಾವಿನ ಬಗ್ಗೆ ಮಾತನಾಡಿರುವ ಕಿರುತೆರೆ ನಟ ಚಂದು ಪತ್ನಿ ಶಿಲ್ಪಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಚಂದು ಹಾಗೂ ಪವಿತ್ರಾ ಅವರ ಸ್ನೇಹ ಬರೀ ಸ್ನೇಹವಾಗಿಲ್ಲ. ಅವರಿಬ್ಬರು ತುಂಬಾ ಆತ್ಮೀಯರಾಗಿದ್ದರು. ಇಬ್ಬರು ಗಂಡ – ಹೆಂಡತಿಯಂತೆ ಇದ್ದರು ಎಂದು ಚಂದು ಪತ್ನಿ ಶಿಲ್ಪಾ ತಿಳಿಸಿದ್ದಾರೆ. ನಾನು, ನನ್ನ ಗಂಡ ತುಂಬ ಚೆನ್ನಾಗಿದ್ದೆವು. ಪವಿತ್ರಾ ಬಂದಮೇಲೆ ಎಲ್ಲ ಹಾಳಾಯ್ತು. ನನಗೆ 4 ವರ್ಷದ ಒಂದು ಮಗು, 8 ವರ್ಷದ ಒಂದು ಮಗು ಇದೆ. ಮೊದಲೆಲ್ಲ ಚಂದು ಮಕ್ಕಳನ್ನು ನೋಡದೆ ಇರುತ್ತಿರಲಿಲ್ಲ. ಚಂದ್ರಕಾಂತ್ ಜೀವನಕ್ಕೆ ಪವಿತ್ರಾ ಬಂದಮೇಲೆ ಅವರು ಮನೆಗೆ ಬರೋದು ಅಪರೂಪ ಆಗಿತ್ತು. ಪವಿತ್ರಾ ಜಯರಾಮ್ ಅವರು ಸಾಯುವ 4 ದಿನದ ಮುಂಚೆ ಚಂದ್ರಕಾಂತ್ ಜೊತೆ ಊಟಿಗೆ ಹೋಗಿದ್ದರು. ಅಲ್ಲಿ ಅವರು ರೀಲ್ಸ್‌ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರು ಎಂದು ಶಿಲ್ಪಾ ಹೇಳಿದ್ದಾರೆ.

2004ರಲ್ಲಿ ನನಗೂ ಚಂದ್ರಕಾಂತ್​ಗು ಪರಿಚಯವಾಯ್ತು. ಅಲ್ಲಿಂದಲೂ ನಾವು ಇಷ್ಟಪಡ್ತಿದ್ದೀವಿ. ಆದರೆ ಮನೆಯವರು ಒಪ್ಪಿಗೆ ಕೊಟ್ಟಿರಲಿಲ್ಲ. ಆಮೇಲೆ ಡಿಮ್ಯಾಂಡ್​ ಮಾಡಿ ಮದುವೆ ಆಗಿದ್ದೆ. ತುಂಬಾ ಅದ್ಧೂರಿಯಾಗಿ ಮದುವೆ ಮಾಡಿದ್ದರು. ಆದರೀಗ ನನಗೆ 8 ವರ್ಷದ ಮಗಳು ಮತ್ತು 4 ವರ್ಷ ಮಗ ಇದ್ದಾನೆ. ಚಂದು ಆಗಾಗ ಬಂದು ಮಕ್ಕಳನ್ನ ನೋಡ್ಕೊಂಡು ಹೋಗ್ತಿದ್ದ. ಲಾಕ್​ಡೌನ್​ ಆದ್ಮೇಲೆ ಚಂದು-ಪವಿತ್ರಾ ರಿಲೇಶನ್​ಷಿಪ್ ಆರಂಭವಾಯ್ತು. ಇವರ ಸಂಬಂಧ ಶುರುವಾದ್ಮೇಲೆ ನನ್ನ ಮೇಲೆ ದೌರ್ಜನ್ಯ ನಡೆಸಿದ್ದರು. ಯಾವಾಗಲೂ ನಿಂದಿಸಿ, ಹಲ್ಲೆ ಮಾಡಿದ್ದಾರೆ. ನನ್ನ ಗಂಡನೇ ಸರ್ವಸ್ವ ಎಂದು ಬದುಕಿದ್ದೆ. ಇವತ್ತು ನನ್ನ ಬಿಟ್ಟು ಹೋದ ಎಂದಿದ್ದಾರೆ.

ಪವಿತ್ರಾ ವಿಷಯ ಗೊತ್ತಾದ್ಮೇಲೆ ಮನೆಯಲ್ಲಿ ಯಾವಾಗಲೂ ಜಗಳ ನಡೆಯುತ್ತಿತ್ತು. ಫೋನ್​ ಮಾಡಿ ನನಗೆ ಬೆದರಿಕೆ ಹಾಕಿದ್ದರು. ಚಂದ್ರಕಾಂತ್ ನನ್ನ ಗಂಡ ಕಣೇ. ನೀನಗೇನು ಎಂದು ಪವಿತ್ರಾ ಹೇಳಿದ್ದಳು. ಪವಿತ್ರಾ ಅವರ ಮಗನ ಬಳಿ ಈ ಬಗ್ಗೆ ಪ್ರಶ್ನಿಸಿದ್ದೆ. ಆದರೂ ಮಗನೂ ನನಗೆ ಬೈಯ್ದಿದ್ದ. ಅವರಿಬ್ಬರು ಖುಷಿಯಾಗಿದ್ದಾರೆ, ಇರಲಿ ಬಿಡಿ ಎಂದು ಪವಿತ್ರಾ ಮಗ ಹೇಳಿದ್ದಾಗಿ ಶಿಲ್ಪಾ ತಿಳಿಸಿದ್ದಾರೆ. ಮನೆಯಲ್ಲಿ ಕುಡಿದು ಬಂದು ಜಗಳ ಮಾಡ್ತಿದ್ದ. ಯಾವಾಗಲೂ ಪವಿತ್ರಾ ಬಗ್ಗೆನೇ ಯೋಚನೆ ಮಾಡ್ತಿದ್ದ. ಮಹಿಳಾ ಮಂಡಲದಲ್ಲಿ ದೂರು ಸಹ ಕೊಟ್ಟಿದೆ. ಅಲ್ಲಿ ಚಂದು ಪವಿತ್ರಾ ನನ್ನ ಲೈಫ್ ಎಂದು ಹೇಳಿದ್ದ.

ಹೈದರಾಬಾದ್‌ನಲ್ಲಿ ಪವಿತ್ರಾ ಜಯರಾಮ್, ಚಂದ್ರಕಾಂತ್ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಅದೇ ಮನೆಯಲ್ಲಿ ಚಂದ್ರಕಾಂತ್ ಅವರು ನೇಣು ಹಾಕಿಕೊಂಡು (ಮೇ 17)ಸಾವನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT