ಜೂನಿಯರ್ ಎನ್‌ಟಿಆರ್- ಪ್ರಶಾಂತ್ ನೀಲ್ 
ಸಿನಿಮಾ ಸುದ್ದಿ

ಪ್ರಶಾಂತ್ ನೀಲ್- ಜೂನಿಯರ್ ಎನ್‌ಟಿಆರ್ ಕಾಂಬಿನೇಶನ್‌ ಮುಂದಿನ ಚಿತ್ರ 'ಎನ್‌ಟಿಆರ್ 31'; ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ

ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರಕ್ಕೆ ಸದ್ಯ ತಾತ್ಕಾಲಿಕವಾಗಿ 'ಎನ್‌ಟಿಆರ್ 31' ಎಂದು ಹೆಸರಿಡಲಾಗಿದೆ. ಚಿತ್ರೀಕರಣವು ಆಗಸ್ಟ್ 2024 ರಿಂದ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಮುಂಬೈ: ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರಕ್ಕೆ ಸದ್ಯ ತಾತ್ಕಾಲಿಕವಾಗಿ 'ಎನ್‌ಟಿಆರ್ 31' ಎಂದು ಹೆಸರಿಡಲಾಗಿದೆ.

ನಿರ್ಮಾಣ ಸಂಸ್ಥೆ Mythri Movie Makers ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿದ್ದು, ಇದರಲ್ಲಿ #NTRNEEL ಹ್ಯಾಶ್‌ಟ್ಯಾಗ್ ಮತ್ತು 'ಹ್ಯಾಪಿ ಬರ್ತ್‌ಡೇ ಮ್ಯಾನ್ ಆಫ್ ಮಾಸಸ್ NTR' ಎಂದು ಬರೆಯಲಾಗಿದೆ. ಆಗಸ್ಟ್ 2024 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

#NTRNeel ತಂಡದಿಂದ 'ಮ್ಯಾನ್ ಆಫ್ ಮಾಸ್' ಜೂನಿಯರ್ ಎನ್‌ಟಿಆರ್ ಅವರಿಗೆ ಜನ್ಮದಿನದ ಶುಭಾಶಯಗಳು. ಆಗಸ್ಟ್ 2024 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಪವರ್‌ಹೌಸ್ ಯೋಜನೆಗಾಗಿ ನೀವು ರೆಡಿಯಾಗಿರಿ ಎಂದು ಶೀರ್ಷಿಕೆ ನೀಡಲಾಗಿದೆ. ಚಿತ್ರದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.

ಸದ್ಯ ನಟ ಜೂನಿಯರ್ ಎನ್‌ಟಿಆರ್ ತಮ್ಮ ಮುಂಬರುವ ಆಕ್ಷನ್ ಚಿತ್ರ 'ದೇವರ: ಅಧ್ಯಾಯ 1' ಬಿಡುಗಡೆಗೆ ಸಜ್ಜಾಗಿದ್ದಾರೆ. ಚಿತ್ರದಲ್ಲಿ ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಮತ್ತು ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ. ಎರಡು ಭಾಗಗಳ ಈ ಚಿತ್ರದ ಮೊದಲ ಭಾಗವು ಕರಾವಳಿ ಭೂಮಿಗೆ ವಿರುದ್ಧವಾಗಿ ಹೊಂದಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT