ಜೂನಿಯರ್ ಎನ್‌ಟಿಆರ್- ಪ್ರಶಾಂತ್ ನೀಲ್ 
ಸಿನಿಮಾ ಸುದ್ದಿ

ಪ್ರಶಾಂತ್ ನೀಲ್- ಜೂನಿಯರ್ ಎನ್‌ಟಿಆರ್ ಕಾಂಬಿನೇಶನ್‌ ಮುಂದಿನ ಚಿತ್ರ 'ಎನ್‌ಟಿಆರ್ 31'; ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ

ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರಕ್ಕೆ ಸದ್ಯ ತಾತ್ಕಾಲಿಕವಾಗಿ 'ಎನ್‌ಟಿಆರ್ 31' ಎಂದು ಹೆಸರಿಡಲಾಗಿದೆ. ಚಿತ್ರೀಕರಣವು ಆಗಸ್ಟ್ 2024 ರಿಂದ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಮುಂಬೈ: ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರಕ್ಕೆ ಸದ್ಯ ತಾತ್ಕಾಲಿಕವಾಗಿ 'ಎನ್‌ಟಿಆರ್ 31' ಎಂದು ಹೆಸರಿಡಲಾಗಿದೆ.

ನಿರ್ಮಾಣ ಸಂಸ್ಥೆ Mythri Movie Makers ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿದ್ದು, ಇದರಲ್ಲಿ #NTRNEEL ಹ್ಯಾಶ್‌ಟ್ಯಾಗ್ ಮತ್ತು 'ಹ್ಯಾಪಿ ಬರ್ತ್‌ಡೇ ಮ್ಯಾನ್ ಆಫ್ ಮಾಸಸ್ NTR' ಎಂದು ಬರೆಯಲಾಗಿದೆ. ಆಗಸ್ಟ್ 2024 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

#NTRNeel ತಂಡದಿಂದ 'ಮ್ಯಾನ್ ಆಫ್ ಮಾಸ್' ಜೂನಿಯರ್ ಎನ್‌ಟಿಆರ್ ಅವರಿಗೆ ಜನ್ಮದಿನದ ಶುಭಾಶಯಗಳು. ಆಗಸ್ಟ್ 2024 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಪವರ್‌ಹೌಸ್ ಯೋಜನೆಗಾಗಿ ನೀವು ರೆಡಿಯಾಗಿರಿ ಎಂದು ಶೀರ್ಷಿಕೆ ನೀಡಲಾಗಿದೆ. ಚಿತ್ರದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.

ಸದ್ಯ ನಟ ಜೂನಿಯರ್ ಎನ್‌ಟಿಆರ್ ತಮ್ಮ ಮುಂಬರುವ ಆಕ್ಷನ್ ಚಿತ್ರ 'ದೇವರ: ಅಧ್ಯಾಯ 1' ಬಿಡುಗಡೆಗೆ ಸಜ್ಜಾಗಿದ್ದಾರೆ. ಚಿತ್ರದಲ್ಲಿ ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಮತ್ತು ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ. ಎರಡು ಭಾಗಗಳ ಈ ಚಿತ್ರದ ಮೊದಲ ಭಾಗವು ಕರಾವಳಿ ಭೂಮಿಗೆ ವಿರುದ್ಧವಾಗಿ ಹೊಂದಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT