ಸಂಭವಾಮಿ ಯುಗೇಯುಗೇ ಸಿನಿಮಾ ಪೋಸ್ಟರ್  
ಸಿನಿಮಾ ಸುದ್ದಿ

'ಸಂಭವಾಮಿ ಯುಗೇಯುಗೇ' ಶೂಟಿಂಗ್ ಪೂರ್ಣ: ಮೋಷನ್ ಪೋಸ್ಟರ್ ಬಿಡುಗಡೆ

ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ 'ಸಂಭವಾಮಿ ಯುಗೇಯುಗೇ' ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂಬುದು ಈ ಮಾತಿನ ಅರ್ಥ

ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ 'ಸಂಭವಾಮಿ ಯುಗೇಯುಗೇ' ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂಬುದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಸಿನಿಮಾ ಶೂಟಿಂಗ್ ಪೂರ್ಣವಾಗಿದ್ದು ಬಿಡುಗಡೆಗೆ ಸಿದ್ಧವಾಗಿದೆ.

ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ. ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು. ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.

ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಂಭಾವಮಿ ಯುಗೇಯಗೇ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT