ಚಿರಂಜೀವಿ ಮತ್ತು ಆಶಿಕಾ ರಂಗನಾಥ್ 
ಸಿನಿಮಾ ಸುದ್ದಿ

ಚಿರಂಜೀವಿ ನಟನೆಯ 'ವಿಶ್ವಂಭರ' ಚಿತ್ರದಲ್ಲಿ ಆಶಿಕಾ ರಂಗನಾಥ್!

ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸೇರಿದಂತೆ ಇತರ ನಟಿಯರಂತೆ ಆಶಿಕಾ ರಂಗನಾಥ್ ಕೂಡ ಕನ್ನಡ ಸೇರಿದಂತೆ ಬೇರೆ ಭಾಷೆಯ ಚಿತ್ರೋದ್ಯಮಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸೇರಿದಂತೆ ಇತರ ನಟಿಯರಂತೆ ಆಶಿಕಾ ರಂಗನಾಥ್ ಕೂಡ ಕನ್ನಡ ಸೇರಿದಂತೆ ಬೇರೆ ಭಾಷೆಯ ಚಿತ್ರೋದ್ಯಮಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ.

ಆಶಿಕಾ ಇತ್ತೀಚೆಗೆ ತೆಲುಗು ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಹಿರಿಯ ತೆಲುಗು ನಟ ನಾಗಾರ್ಜುನ ನಟನೆಯ ನಾ ಸಾಮಿ ರಂಗದಲ್ಲಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ಅದರ ಬೆನ್ನಲ್ಲೇ ಈಗ, ಮಲ್ಲಿಡಿ ವಸಿಷ್ಟ ಬರೆದು ನಿರ್ದೇಶಿಸುತ್ತಿರುವ ವಿಶ್ವಂಭರದಲ್ಲಿ ಮತ್ತೊಂದು ಮಹತ್ವದ ಪಾತ್ರವನ್ನು ಪಡೆದಿರುವುದರಿಂದ ತೆಲುಗು ಚಿತ್ರರಂಗದಲ್ಲಿ ಅವರು ಭರವಸೆಯ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ವಿಶ್ವಂಭರ ಸಿನಿಮಾದಲ್ಲಿ ಟಾಲಿವುಡ್‌ನ ಮೆಗಾ ಸ್ಟಾರ್ ಚಿರಂಜೀವಿ ಜೊತೆ ಪರದೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ.

ವಿಶ್ವಂಭರದಲ್ಲಿ, ತ್ರಿಶಾ ಕೃಷ್ಣನ್, ಮೀನಾಕ್ಷಿ ಚೌಧರಿ ಮತ್ತು ಕುನಾಲ್ ಕಪೂರ್ ಜೊತೆ ಆಶಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಆಕೆಯ ಪಾತ್ರದ ಬಗ್ಗೆ ವಿವರಗಳು ಇನ್ನೂ ಬಹಿರಂಗವಾಗಿಲ್ಲ. ಯುವಿ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಸಾಮಾಜಿಕ-ಫ್ಯಾಂಟಸಿ ಕತೆಗಾಗಿ ಆಶಿಕಾ ಈಗಾಗಲೇ ಕೆಲವು ನಿರ್ಣಾಯಕ ದೃಶ್ಯಗಳ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ವಿಶ್ವಂಭರ 2025 ರ ಬಿಡುಗಡೆಗೆ ಸಿದ್ಧವಾಗಿದೆ ಎಂದು ತಿಳಿದು ಬಂದಿದೆ.

ಏತನ್ಮಧ್ಯೆ, ಆಶಿಕಾ 2022 ರಲ್ಲಿ ಪಟ್ಟಾತು ಅರಸನ್‌ನೊಂದಿಗೆ ತಮಿಳು ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು, ಈಗ ಅವರ ಎರಡನೇ ತಮಿಳು ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದಾರೆ, ಇದರಲ್ಲಿ ಅವರು ಕನ್ನಡದಲ್ಲಿ ಸಿದ್ಧಾರ್ಥ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ, ಇತ್ತೀಚೆಗೆ ವೈದ್ಯಕೀಯ ಥ್ರಿಲ್ಲರ್ O2 ನಲ್ಲಿ ನಟಿಸಿದ್ದ ಆಶಿಕಾ ಅಭಿನಯಕ್ಕೆ ಅಪಾರ ಮೆಚ್ಚುಗೆ ಪಡೆದರು. ಇದರ ಜೊತೆಗೆ ಸುನಿ ನಿರ್ದೇಶನದ ಗತವೈಭವದಲ್ಲಿಯೂ ಅಭಿನಯಿಸುತ್ತಿದ್ದು, ಸದ್ಯ ಚಿತ್ರ ನಿರ್ಮಾಣ ಹಂತದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT