ನಂಜನಗೂಡು ದೇವಾಲಯಕ್ಕೆ ಶಿಲ್ಪಾಶೆಟ್ಟಿ ಭೇಟಿ 
ಸಿನಿಮಾ ಸುದ್ದಿ

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು

ಮೈಸೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಲ್ಪಾ ಶೆಟ್ಟಿ, ಮೈಸೂರಿನ ಇಲವಾಲದಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಂದಿದ್ದೆ. ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಬಗ್ಗೆ ಬಹಳವಾಗಿ ಕೇಳಿದ್ದೆ. ಇಂದು ದೇವರ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು ಎಂದು ಹರ್ಷ ವ್ಯಕ್ತಪಡಿಸಿದರು.

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ಪರಭಾಷೆಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಂಜಯ್​ ದತ್​, ಶಿಲ್ಪಾ ಶೆಟ್ಟಿ, ರವಿಚಂದ್ರನ್​, ರಮೇಶ್​ ಅರವಿಂದ್​ ಅವರಂತಹ ಘಟಾನುಘಟಿ ಕಲಾವಿದರು ‘ಕೆಡಿ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಮೈಸೂರಿನಲ್ಲಿ ಶಿಲ್ಪಾ ಶೆಟ್ಟಿ ‘ಕೆಡಿ’ ಚಿತ್ರದ ಶೂಟಿಂಗ್ ​ನಲ್ಲಿ ಭಾಗಿ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!