ಸಂಭವಾಮಿ ಯುಗೇಯುಗೇ ಚಿತ್ರದ ಹಾಡು ಬಿಡುಗಡೆ ಸಮಾರಂಭ 
ಸಿನಿಮಾ ಸುದ್ದಿ

ಸಂಭವಾಮಿ ಯುಗೇಯುಗೇ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ; ಜೂನ್‌ನಲ್ಲಿ ತೆರೆಗೆ ಬರಲು ಸಿದ್ಧ

ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ‘ಡೋಲು ತಮಟೆ ವಾದ್ಯ…’ ಎಂಬ ಈ ಹಾಡನ್ನು ನಟಿ ಶ್ರುತಿ ಹರಿಹರನ್​ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು.

ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ 'ಸಂಭವಾಮಿ ಯುಗೇ ಯುಗೇ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ‘ಡೋಲು ತಮಟೆ ವಾದ್ಯ…’ ಎಂಬ ಈ ಹಾಡನ್ನು ನಟಿ ಶ್ರುತಿ ಹರಿಹರನ್​ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು. ಈ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ಗೀತಾ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆಯಿದ್ದು, ನಕಾಶ್ ಮತ್ತು ಸ್ಪರ್ಶಾ ಅವರು ಧ್ವನಿ ನೀಡಿದ್ದಾರೆ.

ನಿರ್ಮಾಪಕಿ ಪ್ರತಿಭಾ ಅವರು ‘ರಾಜಲಕ್ಷ್ಮಿ ಎಂಟರ್‌ಟೈನ್‌ಮೆಂಟ್ ಬ್ಯಾನರ್​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಕೃಷಿಯ ಸುತ್ತ ಸುತ್ತುತ್ತದೆ. ಯುವ ಪೀಳಿಗೆಯು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಉದ್ಯೋಗಗಳನ್ನು ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗುವ ಬಗ್ಗೆ ಚರ್ಚಿಸುತ್ತದೆ. ರೈತರು ಮತ್ತು ಕೃಷಿಗೆ ಸಂಬಂಧಿಸಿದ ಈ ಸನ್ನಿವೇಶವನ್ನು ಸಂಭವಾಮಿ ಯುಗೇ ಯುಗೇನಲ್ಲಿ ಚಿತ್ರಿಸಲಾಗಿದೆ.

ಪ್ರಮುಖ ಪಾತ್ರದಲ್ಲಿ ನಟಿಸಿರುವ ಜಯ್ ಶೆಟ್ಟಿ ಗ್ರಾಮದ ಮುಖ್ಯಸ್ಥನ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ನಿಶಾ ರಜಪೂತ್ ನಾಯಕಿಯಾಗಿದ್ದು, ಹಿರಿಯ ನಟಿಯರಾದ ಭವ್ಯಾ ಮತ್ತು ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಪೋಷಕ ಪಾತ್ರದಲ್ಲಿ ಅಭಯ್ ಪುನೀತ್, ಅಶ್ವಿನ್ ಹಾಸನ್ ಮತ್ತು ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ.

ಸಂಭವಾಮಿ ಯುಗೇ ಯುಗೇ ಚಿತ್ರಕ್ಕೆ ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಮತ್ತು ರವೀಶ್ ಆತ್ಮರಾಮ್ ಅವರ ಸಂಕಲನವಿದೆ. ಚಿತ್ರಕ್ಕೆ ಪೂರನ್ ಶೆಟ್ಟಿಗಾರ್ ಅವರ ಸಂಗೀತ ಮತ್ತು ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT