ಸಂಭವಾಮಿ ಯುಗೇಯುಗೇ ಚಿತ್ರದ ಹಾಡು ಬಿಡುಗಡೆ ಸಮಾರಂಭ 
ಸಿನಿಮಾ ಸುದ್ದಿ

ಸಂಭವಾಮಿ ಯುಗೇಯುಗೇ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ; ಜೂನ್‌ನಲ್ಲಿ ತೆರೆಗೆ ಬರಲು ಸಿದ್ಧ

ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ‘ಡೋಲು ತಮಟೆ ವಾದ್ಯ…’ ಎಂಬ ಈ ಹಾಡನ್ನು ನಟಿ ಶ್ರುತಿ ಹರಿಹರನ್​ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು.

ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ 'ಸಂಭವಾಮಿ ಯುಗೇ ಯುಗೇ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ‘ಡೋಲು ತಮಟೆ ವಾದ್ಯ…’ ಎಂಬ ಈ ಹಾಡನ್ನು ನಟಿ ಶ್ರುತಿ ಹರಿಹರನ್​ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು. ಈ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ಗೀತಾ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆಯಿದ್ದು, ನಕಾಶ್ ಮತ್ತು ಸ್ಪರ್ಶಾ ಅವರು ಧ್ವನಿ ನೀಡಿದ್ದಾರೆ.

ನಿರ್ಮಾಪಕಿ ಪ್ರತಿಭಾ ಅವರು ‘ರಾಜಲಕ್ಷ್ಮಿ ಎಂಟರ್‌ಟೈನ್‌ಮೆಂಟ್ ಬ್ಯಾನರ್​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಕೃಷಿಯ ಸುತ್ತ ಸುತ್ತುತ್ತದೆ. ಯುವ ಪೀಳಿಗೆಯು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಉದ್ಯೋಗಗಳನ್ನು ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗುವ ಬಗ್ಗೆ ಚರ್ಚಿಸುತ್ತದೆ. ರೈತರು ಮತ್ತು ಕೃಷಿಗೆ ಸಂಬಂಧಿಸಿದ ಈ ಸನ್ನಿವೇಶವನ್ನು ಸಂಭವಾಮಿ ಯುಗೇ ಯುಗೇನಲ್ಲಿ ಚಿತ್ರಿಸಲಾಗಿದೆ.

ಪ್ರಮುಖ ಪಾತ್ರದಲ್ಲಿ ನಟಿಸಿರುವ ಜಯ್ ಶೆಟ್ಟಿ ಗ್ರಾಮದ ಮುಖ್ಯಸ್ಥನ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ನಿಶಾ ರಜಪೂತ್ ನಾಯಕಿಯಾಗಿದ್ದು, ಹಿರಿಯ ನಟಿಯರಾದ ಭವ್ಯಾ ಮತ್ತು ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಪೋಷಕ ಪಾತ್ರದಲ್ಲಿ ಅಭಯ್ ಪುನೀತ್, ಅಶ್ವಿನ್ ಹಾಸನ್ ಮತ್ತು ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ.

ಸಂಭವಾಮಿ ಯುಗೇ ಯುಗೇ ಚಿತ್ರಕ್ಕೆ ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಮತ್ತು ರವೀಶ್ ಆತ್ಮರಾಮ್ ಅವರ ಸಂಕಲನವಿದೆ. ಚಿತ್ರಕ್ಕೆ ಪೂರನ್ ಶೆಟ್ಟಿಗಾರ್ ಅವರ ಸಂಗೀತ ಮತ್ತು ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!