ನಿರ್ದೇಶಕ ಗುರು ಪ್ರಸಾದ್ 
ಸಿನಿಮಾ ಸುದ್ದಿ

ಪಂಚಭೂತಗಳಲ್ಲಿ ನಿರ್ದೇಶಕ ಗುರುಪ್ರಸಾದ್ ಲೀನ!

ಎರಡನೇ ಪತ್ನಿ ಸಹೋದರನಿಂದ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಗುರುಪ್ರಸಾದ್ ಅಂತ್ಯ ಸಂಸ್ಕಾರದಲ್ಲಿ ನಟ ದುನಿಯಾ ವಿಜಯ್​​, ಡಾಲಿ ಧನಂಜಯ, ಸತೀಶ್​ ನೀನಾಸಂ, ನಿರ್ದೇಶಕ ಯೋಗರಾಜ್ ಭಟ್, ತಬಲಾ ನಾಣಿ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿದ್ದ ಕನ್ನಡ ಸ್ಟಾರ್ ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನಗರದ ವಿಲ್ಸನ್ ಗಾರ್ಡನ್ ಚಿತಾಗಾರಾದಲ್ಲಿ ಭಾನುವಾರ ಸಂಜೆ ನಡೆಯಿತು. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಬ್ರಾಹ್ಮಣ ಸಂಪ್ರದಾಯದಂತೆ ಗುರುಪ್ರಸಾದ್ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಮಾಡಲಾಗಿದ್ದು, ಪಂಚಭೂತಗಳಲ್ಲಿ ಲೀನರಾದರು.

ಎರಡನೇ ಪತ್ನಿ ಸಹೋದರನಿಂದ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಗುರುಪ್ರಸಾದ್ ಅಂತ್ಯ ಸಂಸ್ಕಾರದಲ್ಲಿ ನಟ ದುನಿಯಾ ವಿಜಯ್​​, ಡಾಲಿ ಧನಂಜಯ, ಸತೀಶ್​ ನೀನಾಸಂ, ನಿರ್ದೇಶಕ ಯೋಗರಾಜ್ ಭಟ್, ತಬಲಾ ನಾಣಿ ಮತ್ತಿತರರು ಉಪಸ್ಥಿತರಿದ್ದರು.

ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಮಾದನಾಯಕಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ನಿನ್ನೆ ಅವರು 52ನೇ ಹುಟ್ಟುಹಬ್ಬವನ್ನು ಆಚರಿಸಬೇಕಾಗಿತ್ತು. ಆದರೆ 3 ದಿನಕ್ಕೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ವೃತ್ತಿ ಜೀವನ ಆರಂಭಿಸಿದರು. ಇದು ಜಗ್ಗೇಶ್‌ರ 100ನೇ ಚಿತ್ರ. 2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಹಿಟ್ ಚಿತ್ರ ನೀಡಿತ್ತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್, ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿಯೂ ಮೈಲಾರಿ, ಹುಡುಗರು ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಗುರು ಪ್ರಸಾದ್​ ಅವರ ಆತ್ಮಹತ್ಯೆ ಕುರಿತು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT