ಚಿತ್ರ ತಂಡ 
ಸಿನಿಮಾ ಸುದ್ದಿ

ಆ್ಯಕ್ಷನ್-ಥ್ರಿಲ್ಲರ್ 'ರುದ್ರ ಗರುಡ ಪುರಾಣ' ಸಿನಿಮಾ ಡಿಸೆಂಬರ್ 27ಕ್ಕೆ ಬಿಡುಗಡೆ

ಚಿತ್ರದ "ಕಣ್ಣ ಮುಂದೆ ಬಂದು" ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

ಕವಲುದಾರಿ ನಟ ರಿಷಿ ಅಭಿನಯದ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ರುದ್ರ ಗರುಡ ಪುರಾಣ ಚಿತ್ರ ಡಿ.27ಕ್ಕೆ ಬಿಡುಗಡೆಯಾಗಲಿದೆ.

ಚಿತ್ರದ "ಕಣ್ಣ ಮುಂದೆ ಬಂದು" ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ನಟ ರಿಷಿ, ಯಶಸ್ವಿ ಚಿತ್ರವನ್ನು ನಿರ್ಮಿಸುವಲ್ಲಿ ನಿರ್ಮಾಪಕ ಮತ್ತು ನಿರ್ದೇಶಕರ ಪ್ರಮುಖ ಪಾತ್ರಗಳ ಬಗ್ಗೆ ಹೇಳಿದರು.

ಇದೇ ವೇಳೆ ಚಿತ್ರಕಥೆ ಬರೆದ ನಂದೀಶ್ ಅವರನ್ನು ಶ್ಲಾಘಿಸಿದರು. ಸ್ಕ್ರಿಪ್ಟ್-ಟು-ಸ್ಕ್ರೀನ್ ಅನುವಾದವನ್ನು ಸಕ್ರಿಯಗೊಳಿಸಿದ್ದಕ್ಕಾಗಿ ನಿರ್ಮಾಪಕ ಲೋಹಿತ್ ಅವರಿಗೆ ಧನ್ಯವಾದ ಹೇಳಿದರು.

ಇದೊಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ನನ್ನದು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ. ಬಹಳ ಸಖತ್ತಾಗಿದೆ. ಕಥೆಯ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಇಂದು ಬಿಡುಗಡೆ ಆಗಿರುವ "ಕಣ್ಣ ಮುಂದೆ ಬಂದು" ಹಾಡು ಎಲ್ಲರ ಹೃದಯಕ್ಕೆ ಹತ್ತಿರವಾಗಲಿದೆ. ಚಿತ್ರ ಕೂಡ ಇಷ್ಟ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು‌.

ಚಿತ್ರದಲ್ಲಿ ರಿಷಿ ಜೊತೆಗೆ ಅಶ್ವಿನಿ ಗೌಡ, ಶಿವರಾಜ್ ಕೆ.ಆರ್ ಪೇಟೆ, ರಾಮ್ ಪವನ್, ನಂದ, ವಂಶಿ ಸೇರಿದಂತೆ ಕೆಲವರು ಅಭಿನಯಿಸಿದ್ದಾರೆ.

ಹೆಸರಾಂತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಬಳಿ ಕಾರ್ಯ ನಿರ್ವಹಿಸಿರುವ ಕೆ.ಪಿ (ಕೃಷ್ಣಪ್ರಸಾದ್) ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಈಗ ಬಿಡುಗಡೆಯಾಗಿರುವ ಹಾಡು ಹಾಗೂ ಹಾಡಿದವರ ಬಗ್ಗೆ ಕೆ.ಪಿ ಇದೇ ವೇಳೆ ಮಾಹಿತಿ ನೀಡಿದರು.

ಈ ಚಿತ್ರಕ್ಕೆ ಸಂದೀಪ್ ಕುಮಾರ್ ಅವರ ಛಾಯಾಗ್ರಹಣವಿದ್ದು, ಅಶ್ವಿನಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಅಶ್ವಿನಿ ಲೋಹಿತ್ ಚಿತ್ರ ನಿರ್ಮಿಸಿದ್ದಾರೆ, ಇನ್ನು ಚಿತ್ರದ ತಾರಾಗಣದಲ್ಲಿ ವಿನೋದ್ ಆಳ್ವ, ಗಿರಿ, ಕೆಎಸ್ ಶ್ರೀಧರ್, ಮತ್ತು ಜಗಪ್ಪ ಮತ್ತು ಪ್ರಸನ್ನ ಮುಂತಾದ ಹಾಸ್ಯ ನಟರು ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌