ಕಿಶೋರ್ ಮತ್ತು ಹರ್ಷಿಲ್ ಕೌಶಿಕ್ 
ಸಿನಿಮಾ ಸುದ್ದಿ

'ಅನಾಮಧೇಯ ಅಶೋಕ್ ಕುಮಾರ್' ಚಿತ್ರಕ್ಕೆ ಹರ್ಷಿಲ್ ಕೌಶಿಕ್ ಜೊತೆಯಾದ ಕಿಶೋರ್!

ಈಗಾಗಲೇ ಚಿತ್ರತಂಡ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ವಿವಿಧ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿರುವ ಬಹುಮುಖ ನಟ ಕಿಶೋರ್ ಅವರು ಸಾಗರ್ ಕುಮಾರ್ ನಿರ್ದೇಶಿಸುತ್ತಿರುವ ಅನಾಮಧೇಯ ಅಶೋಕ್ ಕುಮಾರ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈಗಾಗಲೇ ಚಿತ್ರತಂಡ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರದ ಕೆಲವು ಸ್ಟಿಲ್ ಗಳನ್ನು ಹಂಚಿಕೊಳ್ಳಲಾಗಿದೆ. ಚಿತ್ರದಲ್ಲಿ ನಟ ಹರ್ಶಿಲ್ ಕೌಶಿಕ್ ಕೂಡ ನಟಿಸಿದ್ದಾರೆ.

ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ನಟ ಕಿಶೋರ್ ಅವರು ಸಲ್ಮಾನ್ ಖಾನ್ ಅಭಿನಯದ ಮತ್ತು ಎಆರ್.ಮುರುಗದಾಸ್ ನಿರ್ದೇಶನದ ಸಿಕಂದರ್ ಚಿತ್ರದಲ್ಲಿಯೂ ನಟಿಸುತ್ತಿದ್ದು, ಈ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಅನಾಮಧೇಯ ಅಶೋಕ್ ಕುಮಾರ್ ಚಿತ್ರದ ಕಥೆಯು ಖ್ಯಾತ ವಕೀಲರೊಬ್ಬರ ಕೊಲೆ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಜೀವನ್ಮರಣದ ಸುತ್ತ ಸುತ್ತುತ್ತದೆ. ಪಟ್ಟುಬಿಡದ ಪತ್ರಕರ್ತನೊಬ್ಬನ ಅನುಮಾನದ ಜಾಲದಲ್ಲಿ ಸಿಲುಕಿಕೊಳ್ಳುವುದು, ಪೊಲೀಸ್ ಅಧಿಕಾರಿಯಾಗಿ ಹರ್ಷಿಲ್ ಕೌಶಿಕ್ ಎಂಟ್ರಿ, ಸತ್ಯವನ್ನು ಬಹಿರಂಗಪಡಿಸುವ ಕಥೆಯನ್ನು ಚಿತ್ರ ಹೊಂದಿದೆ.

ಎಸ್‌ಕೆಎನ್ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸಲಾದ ಮತ್ತು ಜನನಿ ಪಿಕ್ಚರ್ಸ್ ವಿತರಿಸಿದ ಈ ಚಿತ್ರಕ್ಕೆ ಬೆನ್ನಿ ಥಾಮಸ್ ಹಾಗೂ ನಿರ್ದೇಶಕ ಸಾಗರ್ ಕುಮಾರ್ ಅವರು ಕಥೆ ಬರೆದಿದ್ದಾರೆ. ಚಿತ್ರದ ಡಿಒಪಿ ಸುನಿಲ್ ಹೊನಳ್ಳಿ, ಮತ್ತು ಸಂಗೀತವನ್ನು ಆಜಾದ್ ಸಂಯೋಜಿಸಿದ್ದಾರೆ, ಸಂಕಲನವನ್ನು ಕೆ. ಯೇಸು ನಿರ್ವಹಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವು ತಮಿಳಿನಲ್ಲೂ ಡಬ್ ಆಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT