ನಿಲ್ಲಬೇಡ ಡ್ಯಾನ್ಸ್ ಮ್ಯೂಸಿಕ್ ಆಲ್ಬಂ ತಂಡ 
ಸಿನಿಮಾ ಸುದ್ದಿ

ಖಿನ್ನತೆ ಸಮಯದಲ್ಲಿ "ನಿಲ್ಲಬೇಡ" ನನಗೆ ಸಹಾಯ ಮಾಡಿತು: ಚಂದನ್ ಶೆಟ್ಟಿ

‘ಕಪ್ ಗೆಲ್ಲೋದು ಮುಖ್ಯ ಅಲ್ಲ. ಮನಸ್ಸುಗಳನ್ನು ಗೆಲ್ಲೋದು ಮುಖ್ಯ’ ಎನ್ನುವ ಅಡಿ ಬರಬರಹ ಈ ಹಾಡಿಗಿದ್ದು, ನಿರ್ದೇಶಕ ಅಭಿಷೇಕ್ ಮಠದ್ ಅವರೇ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ಸುನಿಧಿ ಅವರ ಅಜ್ಜಿ ಪ್ರತಿಭಾ ನಿಲೋಪಂತ್ ಬಂಡವಾಳ ಹೂಡಿದ್ದಾರೆ.

ಉತ್ತರ ಕರ್ನಾಟಕದ ಯುವ ಪ್ರತಿಭೆ ಸುನಿಧಿ ನಿಲೋಪಂತ್ ನಟಿಸಿರುವ, ಅಭಿಷೇಕ್ ಮಠದ್ ನಿರ್ದೇಶಿಸಿರುವ ಹಾಗೂ ಚಂದನ್ ಶೆಟ್ಟಿ ಹಾಡಿ, ಸಂಗೀತ ಸಂಯೋಜಿಸಿರುವ “ನಿಲ್ಲಬೇಡ” ಡ್ಯಾನ್ಸ್ ಮ್ಯೂಸಿಕ್ ಆಲ್ಬಂ ಇತ್ತೀಚಿಗೆ ಬಿಡುಗಡೆಯಾಯಿತು.

‘ಕಪ್ ಗೆಲ್ಲೋದು ಮುಖ್ಯ ಅಲ್ಲ. ಮನಸ್ಸುಗಳನ್ನು ಗೆಲ್ಲೋದು ಮುಖ್ಯ’ ಎನ್ನುವ ಅಡಿ ಬರಬರಹ ಈ ಹಾಡಿಗಿದ್ದು, ನಿರ್ದೇಶಕ ಅಭಿಷೇಕ್ ಮಠದ್ ಅವರೆ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ಸುನಿಧಿ ಅವರ ಅಜ್ಜಿ ಪ್ರತಿಭಾ ನಿಲೋಪಂತ್ ಬಂಡವಾಳ ಹಾಕಿದ್ದಾರೆ.

ಹರಿಣಿ ಶ್ರೀಕಾಂತ್, ಅನುಪ್ರಭಾಕರ್ ಆಸ್ಗರ್, ಶಶಿ ಮಾಸ್ಟರ್, ಅಭಿಷೇಕ್ ಮಠದ್ ಸೇರಿದಂತೆ ಮತ್ತಿತರರು ಸುನಿಧಿ ಜೊತೆಗೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಹಾಡು ಬಿಡುಗಡೆ ನಂತರ ಗಣ್ಯರು ಹಾಗೂ ಮ್ಯೂಸಿಕ್ ಸಾಂಗ್ ನ ಸದಸ್ಯರು ಮಾತನಾಡಿದರು.

ನಿರ್ಮಾಪಕರ ಸಂಘದ ಆಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ, ಯುವ ಪ್ರತಿಭೆ ಸುನಿಧಿ ಮೈನಲ್ಲಿ ಮೂಳೆ ಇಲ್ಲದವರಂತೆ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಗಾಯನ ವಯಸ್ಸಾದವರೂ ಹೆಜ್ಜೆ ಹಾಕುವ ಹಾಗಿದೆ. “ಬಳೆ ಪೇಟೆ” ಚಿತ್ರೀಕರಣದ ವೇಳೆ ಅಭಿಷೇಕ್ ಮಠದ್ ಅವರ ಕೆಲಸ ನೋಡಿದ್ದೆ. ಒಳ್ಳೆಯ ಕೆಲಸಗಾರ. ಇನ್ನು “ನಿಲ್ಲಬೇಡ ” ಆಲ್ಬಂ ಯುವ ಪ್ರತಿಭೆಗಳಿಗೆ ಮತ್ತಷ್ಟು ಪ್ರೋತ್ಸಾಹ ಸಿಗಲಿ, ರಾಜ್ಯದಲ್ಲಿ ಅಮದು ಮಾಡಿಕೊಂಡವರಿಗೆ ರೆಡ್ ಕಾರ್ಪೆಟ್ ಹಾಕ್ತಾರೆ‌. ಆದರೆ, ಇಲ್ಲಿನ ಪ್ರತಿಭೆಗಳಿಗೆ ಅವಕಾಶ ಕಡಿಮೆ. ದೇಶದ ಯಾವುದೇ ಭಾಷೆಯಲ್ಲಿ ಅವಕಾಶ ಸಿಕ್ಕರೂ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಅತಿಥಿಯಾಗಿ ಆಗಮಿಸಿದ್ದ ನಟ ನವೀನ್ ಶಂಕರ್ ಮಾತನಾಡಿ, ಹಾಡು ಚೆನ್ನಾಗಿ ಮೂಡಿ ಬಂದಿದೆ. ಕಲಾವಿದರು, ತಂತ್ರಜ್ಞರನ್ನು ಅಮದು‌ ಮಾಡಿಕೊಳ್ಳುವ ಸಮಯದಲ್ಲಿ ಇಲ್ಲಿನ ಪ್ರತಿಭೆಗಳು ಬೇರೆ ಭಾಷೆಗೆ ಹೋಗುವಂತಾಗಲಿ ಎಂದು ತಿಳಿಸಿದರು.

ನಿರ್ದೇಶಕ ಅಭಿಷೇಕ್ ಮಠದ್ ಮಾತನಾಡಿ, ಈ ಹಾಡು ಉತ್ತಮ ರೀತಿಯಲ್ಲಿ ಮೂಡಿ ಬರಲು ಸುನಿಧಿ ಅವರ ಪ್ರತಿಭೆಯೇ ಕಾರಣ. ಹಾಡು‌ ಚೆನ್ನಾಗಿ ಬಂದಿದೆ. ಯುವ ಪ್ರತಿಭೆಗೆ ಮತ್ತಷ್ಟು ಅವಕಾಶ ಸಿಗಲಿ. "ನಿಲ್ಲಬೇಡ" ಹಾಡಿಗೆ ಡಾಲಿ ಧನಂಜಯ, ನೃತ್ಯ ನಿರ್ದೇಶಕ ಹರ್ಷ ಮತ್ತಿತತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ" ಎಂದು ಹೇಳಿದರು.

ಚಂದನ್ ಶೆಟ್ಟಿ ಮಾತನಾಡಿ , ಆಗಿನ್ನು ವಿಚ್ಛೇದನ ಆಗಿ ಮೂರು ನಾಲ್ಕು ವಾರವಾಗಿತ್ತು. ಆ ಸಮಯದಲ್ಲಿ ಅಭಿಷೇಕ್ ಈ ಹಾಡಿನ ಬಗ್ಗೆ ಮಾತನಾಡಿದರು. ಹಾಡಿ, ಸಂಗೀತ ನೀಡುವಂತೆ ಮನವಿ ಮಾಡಿದರು. ಖಿನ್ನತೆಗೆ ಒಳಗಾದ ಸಮಯದಲ್ಲಿ "ನಿಲ್ಲಬೇಡ" ಹಾಡು ಹಾಡಿದ್ದೇನೆ. ಜೀವನದಲ್ಲಿ ಏನೇ ಕಷ್ಟ ಬಂದರೂ 'ನಿಲ್ಲಬೇಡ' ಮುಂದುವರಿಯಬೇಕು ಎಂದು ಹೇಳಿದರು.

ಸುನಿಧಿ ನಿಲೋಪಂತ್ ಮಾತನಾಡಿ, ಮೊದಲು ಚಿತ್ರೀಕರಣಕ್ಕೆ ಹೋದಾಗ ಭಯವಾಗಿತ್ತು. ಈ ಹಾಡನ್ನು ಎಲ್ಲಾ ನೃತ್ಯಪಟುಗಳಿಗೆ ಅರ್ಪಣೆ ಮಾಡುತ್ತೇನೆ. ನಿಮ್ಮ ಕನಸನ್ನು ನನಸು ಮಾಡಲು ಮುನ್ನುಗ್ಗಿ ಎಂದರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT