ನಟ ಜಗ್ಗೇಶ್ 
ಸಿನಿಮಾ ಸುದ್ದಿ

ಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತವೆ: ಜಗ್ಗೇಶ್ ಹೇಳಿದ ಬೊಗಳೊ ನಾಯಿ ಯಾರು?

ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು.

ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಿರ್ದೇಶಕ ಗುರುಪ್ರಸಾದ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲಭಾಧೆಯಿಂದ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ‘ಮಠ’ ಹಾಗೂ ‘ಎದ್ದೇಳು ಮಂಜುನಾಥ್’ ರೀತಿಯ ಹಿಟ್ ಸಿನಿಮಾಗಳನ್ನು ನೀಡಿದ ನಿರ್ದೇಶಕ ಹೀಗೆ ದಿಢೀರ್ ಬಾರದಲೋಕಕ್ಕೆ ಪಯಣ ಬೆಳೆಸಿದ್ದು ನಿಜಕ್ಕೂ ಬೇಸರದ ಸಂಗತಿ.

ಇನ್ನು ಗುರುಪ್ರಸಾದ್ ನಿಧನ ಸುದ್ದಿ ಹೊರಬೀಳುತ್ತಿದ್ದಂತೆ ನಟ ಜಗ್ಗೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಆದರೆ ಗುರು ಪ್ರಸಾದ್ ಕುರಿತು ನವರಸ ನಾಯಕನ ಕೆಲ ಹೇಳಿಕೆ ಬೇಸರ ಮೂಡಿಸಿತ್ತು. ಗುರುಪ್ರಸಾದ್ ಸುತ್ತಾ ನಟ ಜಗ್ಗೇಶ್ ಆಡಿದ ಕೆಲ ಮಾತುಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು.

ತಮ್ಮ ವಿರುದ್ಧ ಮಾತನಾಡಿದವರಿಗೆ ಜಗ್ಗೇಶ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. "ಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತದೆ. ಅದಕ್ಕೆ ಸೈಂಟಿಫಿಕ್ ಕಾರಣ "ಭಯ". ಎರಡನೆಯದು ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ಇದರ ತಾತ್ಪಾರ್ಯ "ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು" ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಜಗ್ಗೇಶ್ ತಮ್ಮ ವಿರುದ್ಧ ಮಾತನಾಡಿದವರಿಗೆ ಪರೋಕ್ಷವಾಗಿ ತಿರುಗೇಟು ಕೊಟ್ಟಿರುವುದು ಗೊತ್ತಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT