ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಸುಳ್ಳು ಹೇಳಲ್ಲ, ನನಗೆ ಆರೋಗ್ಯ ಸಮಸ್ಯೆಯಿದೆ; ಸರ್ಜರಿಗೆ ಅಮೆರಿಕಾಗೆ ಹೋಗಬೇಕು: ನಟ ಶಿವರಾಜ್ ಕುಮಾರ್

ನನಗೆ ಅನಾರೋಗ್ಯ ಇರುವುದು ನಿಜ, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ, ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ.

ಬೆಂಗಳೂರು: ಎಲ್ಲರ ರೀತಿ ನಾನು ಮನುಷ್ಯನೇ, ನನಗೂ ಆರೋಗ್ಯ ಸಮಸ್ಯೆಯಿದೆ, ನಾನು ಸುಳ್ಳು ಹೇಳಲ್ಲ, ಟ್ರೀಟ್ ಮೆಂಟ್ ತಗೋತಿದ್ದೇನೆ, ಆರೋಗ್ಯ ಸಮಸ್ಯೆಯಿಂದ ನನಗೆ ಗಾಬರಿಯಾಗಿತ್ತು ಆದರೆ ಟ್ರೀಟ್ ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ನನಗೆ ಅನಾರೋಗ್ಯ ಇರುವುದು ನಿಜ, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ, ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ. ಜನವರಿಯಿಂದ ನಾನು ಫುಲ್ ಫಾರ್ಮ್ ಶಿವಣ್ಣ ಆಗಿ ಬರುತ್ತೇನೆ ಎಂದಿದ್ದಾರೆ.

ತಮ್ಮ ಅನಾರೋಗ್ಯದ ವಿಚಾರದ ಬಗ್ಗೆ ನಿರ್ಮಾಪಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ಮುಂದೆ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಹೇಳಿದ್ದೇನ, ಈ ನಡುವೆ ನಾನು 45 ಸಿನಿಮಾದಲ್ಲಿ ಭಾಗಿಯಾಗಿದ್ದೇನೆ, ಆ್ಯಕ್ಷನ್ ಸೀನ್ ಮಾಡಿದ್ದೇನೆ ಎಂದಿದ್ದಾರೆ. ಉಳಿದ ಸಮಯದಲ್ಲಿ ನಾವು ಅಭಿಮಾನಿಗಳು ಬೇಕು ಎನ್ನುತ್ತೇವೆ. ಈ ರೀತಿ ವಿಚಾರ ಬಂದಾಗ ಏಕೆ ಅವರನ್ನು ದೂರ ಇಡಬೇಕು? ಈ ಕಾರಣಕ್ಕೆ ನಾನು ಸುಳ್ಳು ಹೇಳೋದು ಬೇಡ ಎಂದು ಗೀತಾ ಅವರ ಬಳಿ ಹೇಳಿದೆ. ಅಭಿಮಾನಿಗಳು ಫೋಟೋ ತೆಗೆಸಿಕೊಳ್ಳೋಕೆ ಬಂದಾಗ ದೂರ ನಿಲ್ಲಿ ಎನ್ನುತ್ತೇನೆ. ಅವರಿಗೆ infection ಆಗಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದೇನೆ ಅಷ್ಟೇ. ಇದೆಲ್ಲ ಇನ್ನೆರಡು ತಿಂಗಳು ಅಷ್ಟೇ’ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT