ರಾಜು ಜೇಮ್ಸ್ ಬಾಂಡ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ರಾಜು ಜೇಮ್ಸ್ ಬಾಂಡ್' ಸಿನಿಮಾ ಡಿಸೆಂಬರ್ 27ಕ್ಕೆ ಬಿಡುಗಡೆ

ಹಲವು ದಿನಗಳ ಊಹಾಪೋಹಗಳ ನಂತರ ಕಳೆದ ಶನಿವಾರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

'ಫಸ್ಟ್ ರ‍್ಯಾಂಕ್ ರಾಜು' ಸಿನಿಮಾ ಮೂಲಕ ಗಮನ ಸೆಳೆದಿದ್ದ ನಟ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಸಿನಿಮಾ ಡಿಸೆಂಬರ್ 27 ರಂದು ಬಿಡುಗಡೆಯಾಗುತ್ತಿದೆ.

ದೀಪಕ್ ಮಧುವನಹಳ್ಳಿ ನಿರ್ದೇಶನದ ಈ ಚಿತ್ರವು ಶುದ್ಧ ಮನೋರಂಜನೆ ಸಿನಿಮಾ ಆಗಿದೆ. ಹಲವು ದಿನಗಳ ಊಹಾಪೋಹಗಳ ನಂತರ ಕಳೆದ ಶನಿವಾರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಮತ್ತು ಕಿರಣ್ ಭರ್ತೂರು ಅವರು ಮೋಷನ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದರು.

ಗುರುನಂದನ್ ಅವರು 'ಫಸ್ಟ್ ರ‍್ಯಾಂಕ್ ರಾಜು' ಇಮೇಜ್ ನಿಂದ ಹೊರಬಂದಿದ್ದು, ಈ ಚಿತ್ರದಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ಮಧುವನಹಳ್ಳಿ ಅವರು ಹೇಳಿದ್ದಾರೆ.

‘ರಾಜು ಜೇಮ್ಸ್ ಬಾಂಡ್’ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಸಂಭಾಷಣೆ ಇರುವುದಿಲ್ಲ. ಇದೊಂದು ಶುದ್ಧ ಮನೋರಂಜನೆ ಸಿನಿಮಾ ಆಗಿದೆ.. ಎರಡುಕಾಲು ಗಂಟೆಗಳ ಚಿತ್ರದಲ್ಲಿ ಮಕ್ಕಾಲು ಗಂಟೆ ನೀವು ನಗುವಿಗೆ ಮೀಸಲಿಡಬೇಕು. ವರ್ಷದ ಕೊನೆಯಲ್ಲಿ ನಗುನಗುತ್ತಾ ನೂತನ ವರ್ಷವನ್ನು ನಮ್ಮ ಸಿನಿಮಾ ಮೂಲಕ ಸ್ವಾಗತಿಸೋಣ’ ಎಂದರು.

‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾದ ನಾಯಕ ಗುರುನಂದನ್ ಮಾತನಾಡಿ, ‘ಜೇಮ್ಸ್ ಬಾಂಡ್’ ರಾಜುಗೂ ‘ಫಸ್ಟ್ ರ‍್ಯಾಂಕ್’ ರಾಜೂಗೂ ಬಹಳ ವ್ಯತ್ಯಾಸ ಇದೆ. ಎರಡು ಪಾತ್ರಗಳು ಒಂದಕ್ಕೊಂದು ಬಹಳ ಭಿನ್ನ, ವೈರುದ್ಯ ಹೊಂದಿವೆ ಎಂದರು.

ಚಿತ್ರದಲ್ಲಿ ಮೃದುಲಾ ನಾಯಕಿಯಾಗಿ ನಟಿಸಿದ್ದು, ರವಿಶಂಕರ್, ಚಿಕ್ಕಣ್ಣ, ಸಾಧು ಕೋಕಿಲ, ಅಚ್ಯುತ್ ಕುಮಾರ್ ಮತ್ತು ಜೈ ಜಗದೀಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನೃತ್ಯ ನಿರ್ದೇಶಕ ಮುರಳಿ ಅವರು ನಾಲ್ಕು ಹಾಡುಗಳನ್ನು ನಿರ್ದೇಶಿಸಿದ್ದಾರೆ, ಎರಡು ಭಾರತದಲ್ಲಿ ಮತ್ತು ಎರಡು ಲಂಡನ್‌ನಲ್ಲಿ ಚಿತ್ರೀಕರಿಸಲಾಗಿದೆ. ರಾಜು ಜೇಮ್ಸ್ ಬಾಂಡ್ ಕನ್ನಡ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT