ಬಿಸ್ಲೆರಿ ನೀರಿನ ಬಾಟಲಿ ಮೇಲೆ ಭೈರತಿ ರಣಗಲ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

Video: ಕನ್ನಡ ಚಿತ್ರರಂಗದಲ್ಲಿ ಇದೇ ಮೊದಲು; Bisleri ನೀರಿನ ಬಾಟಲ್ ಮೇಲೆ Bhairathi Ranagal ಪ್ರಚಾರ

ನೀರಿನ ಬಾಟಲಿ ಮೇಲೆ ಹಾಕುವ ಸ್ಟಿಕರ್ ಮೇಲೆ ಭೈರತಿ ರಣಗಲ್ ಚಿತ್ರದ ಪುಟ್ಟ ಪೋಸ್ಟರ್ ಮುದ್ರಣವಾಗುತ್ತಿರುವ ಮತ್ತು ನೀರಿನ ಬಾಟಲಿ ಮೇಲೆ ಪೋಸ್ಟರ್ ಸಹಿತ ಸ್ಟಿಕ್ಕರ್ ಇರುವ ನೀರಿನ ಬಾಟಲಿಗಳು ಹೊರಬರುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಚಿತ್ರ ಪ್ರಚಾರದಲ್ಲಿ ನಟ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರತಂಡ ಒಂದು ಹೆಜ್ಜೆ ಮುಂದೆ ಹೋಗಿದ್ದು, ಬಿಸ್ಲೇರಿ ನೀರಿನ ಬಾಟಲ್ ಮೇಲೆ Bhairathi Ranagal ಚಿತ್ರದ ಪೋಸ್ಟರ್ ಪ್ರಿಂಟ್ ಮಾಡಿಸುವ ಮೂಲಕ ಭರ್ಜರಿ ಪ್ರಚಾರ ನಡೆಸಿದೆ.

ಮೂಲಗಳ ಪ್ರಕಾರ ಕರ್ನಾಟಕದಾದ್ಯಂತ ಸುಮಾರು 1 ಕೋಟಿ ಬಿಸ್ಲೆರಿ ನೀರಿನ ಬಾಟಲ್ ಗಳ ಮೇಲೆ ಭೈರತಿ ರಣಗಲ್ ಪೋಸ್ಟರ್ ರಾರಾಜಿಸುತ್ತಿದ್ದು, ನೀರಿನ ಬಾಟಲಿ ಮೇಲೆ ಹಾಕುವ ಸ್ಟಿಕರ್ ಮೇಲೆ ಭೈರತಿ ರಣಗಲ್ ಚಿತ್ರದ ಪುಟ್ಟ ಪೋಸ್ಟರ್ ಮುದ್ರಣವಾಗುತ್ತಿದೆ.

ನೀರಿನ ಬಾಟಲಿ ಮೇಲೆ ಪೋಸ್ಟರ್ ಸಹಿತ ಸ್ಟಿಕ್ಕರ್ ಇರುವ ನೀರಿನ ಬಾಟಲಿಗಳು ಹೊರಬರುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಶಿವರಾಜ್ ಕುಮಾರ್ ಅಭಿಮಾನಿಗಳು ಮತ್ತು ಕನ್ನಡ ಸಿನಿ ಅಭಿಮಾನಿಗಳು ಈ ವಿಡಿಯೋವನ್ನು ವ್ಯಾಪಕ ಶೇರ್ ಮಾಡುತ್ತಿದ್ದಾರೆ.

ಅಂದಹಾಗೆ ನಟ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಭೈರತಿ ರಣಗಲ್’ ಚಿತ್ರ ನವೆಂಬರ್ 15ರಂದು ತೆರೆಗೆ ಬರಲಿದೆ. ಚಿತ್ರವನ್ನು ಮಫ್ತಿ ಖ್ಯಾತಿಯ ನರ್ತನ್ ನಿರ್ದೇಶಿಸಿದ್ದು, ಮಫ್ತಿ ಚಿತ್ರದಲ್ಲಿ ಶಿವಣ್ಣ ಭೈರತಿ ರಣಗಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಭೈರತಿ ರಣಗಲ್ ಯಾರು? ಹೇಗೆ ಭೈರತಿ ರಣಗಲ್ ಆದ್ರು ಅನ್ನೋ ವಿಚಾರ ಕೂಡ ರಿವೀಲ್ ಆಗುತ್ತಿದೆ.

ಕನ್ನಡದ ಮೊದಲ ಪ್ರೀಕ್ವೆಲ್ ಸಿನಿಮಾ ಭೈರತಿ ರಣಗಲ್ ಚಿತ್ರ ಕನ್ನಡದ ಮೊದಲ ಪ್ರೀಕ್ವೆಲ್ ಚಿತ್ರವಾಗಿದ್ದು, ಈ ಮೂಲಕ ಭೈರತಿ ರಣಗಲ್ ಈ ವಿಚಾರದಲ್ಲೂ ವಿಶೇಷವಾಗಿದೆ. ಭೈರತಿ ರಣಗಲ್ ಚಿತ್ರದಲ್ಲಿ ರುಕ್ಮಿಣಿ ವಸಂತ್ ಮತ್ತು ಛಾಯಾ ಸಿಂಗ್ ನಟಿಸಿದ್ದಾರೆ. ಸಿಂಗ ಪಾತ್ರದಲ್ಲಿ ಮಧು ಗುರುಸ್ವಾಮಿ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

PM Modi 75th birthday: ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್: ಭಾರತ-ಯುಎಸ್ ಸಂಬಂಧ ವೃದ್ಧಿ ಬಗ್ಗೆ ಉಭಯ ನಾಯಕರು ಚರ್ಚೆ

ಡೆಹ್ರಾಡೂನ್ ನೆರೆಹೊರೆ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ: ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ; ವಿಶ್ವನಾಥ್

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್‌ ಸೇರಿ ಮೂವರ ಬಂಧನ

ಜಾತಿಗಣತಿ ಹೆಸರಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ: ಬಿ.ಎಸ್.ಯಡಿಯೂರಪ್ಪ

SCROLL FOR NEXT