ರಿಪ್ಪನ್ ಸ್ವಾಮಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ರಿಪ್ಪನ್ ಸ್ವಾಮಿ'ಗೆ ಜೋಡಿಯಾದ ಮಲೆನಾಡ ಬೆಡಗಿ ಅಶ್ವಿನಿ ಚಂದ್ರಶೇಖರ್

ಚಿತ್ರದಲ್ಲಿ ಅಶ್ವಿನಿ ಚಂದ್ರಶೇಖರ್ ಅವರು ವೈದ್ಯೆ ಪಾತ್ರದಲ್ಲಿ ಹಾಗೂ ವಿಜಯ್ ರಾಘವೇಂದ್ರ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದು, ಚಿತ್ರತಂಡ ಚಿತ್ರದ ಫಸ್ಟ್ ಲುಕ್ ನ್ನು ಬಿಡುಗಡೆ ಮಾಡಿದೆ.

ಯುವ ನಿರ್ದೇಶಕ ಕಿಶೋರ್​ ಮೂಡುಬಿದ್ರೆ ಆ್ಯಕ್ಷನ್​- ಕಟ್​ ಹೇಳುತ್ತಿರುವ ಹಾಗೂ ವಿಜಯ್​ ರಾಘವೇಂದ್ರ ಅವರು ನಾಯಕನಾಗಿರುವ ರಿಪ್ಪನ್​ಸ್ವಾಮಿ ಚಿತ್ರದಲ್ಲಿ ಅಶ್ವಿನಿ ಚಂದ್ರಶೇಖರ್ ಅವರು ನಟಿಸಿದ್ದು, ಈ ಮೂಲಕ ಸ್ಯಾಂಡಲ್​ವುಡ್​ಗೆ ಮತ್ತೆ ವಾಪಸ್ಸಾಗಿದ್ದಾರೆ.

ಚಿತ್ರದಲ್ಲಿ ಅಶ್ವಿನಿ ಚಂದ್ರಶೇಖರ್ ಅವರು ವೈದ್ಯೆ ಪಾತ್ರದಲ್ಲಿ ಹಾಗೂ ವಿಜಯ್ ರಾಘವೇಂದ್ರ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದು, ಚಿತ್ರತಂಡ ಚಿತ್ರದ ಫಸ್ಟ್ ಲುಕ್ ನ್ನು ಬಿಡುಗಡೆ ಮಾಡಿದೆ.

ಮೂಲತಃ ಶಿವಮೊಗ್ಗದ ಅಶ್ವಿನಿ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್​ ಪೂರ್ಣಗೊಳಿಸಿ, ಪ್ರೇಮ ಪಲ್ಲಕ್ಕಿ ಚಿತ್ರದ ಮೂಲಕ 2015ರಲ್ಲಿ ಸ್ಯಾಂಡಲ್​ವುಡ್​ಗೆ ನಾಯಕಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ಒಂದು ರೊಮ್ಯಾಂಟಿಕ್​ ಪ್ರೇಮಕತೆ’, ಆಕ್ಟೋಪಸ್​ ಸೇರಿ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು, ಬಳಿಕ ಪರಭಾಷೆಗಳಲ್ಲಿ ಬಿಜಿಯಾದರು.

ತೆಲುಗಿನಲ್ಲಿ ಪ್ರೇಮ್​ ಕಹಾನಿ, ಆವು ಪುಲಿ ಮಧ್ಯಲೋ ಪ್ರಭಾಸ್​ ಪೆಳ್ಳಿ, ತಮಿಳಿನಲ್ಲಿ ಮೆರ್ಲಿನ್​. ಪರಂಜು ಸೆಲ್ಲವ, ಕಾಲ್​ ಟ್ಯಾಕ್ಸಿ. ಜಿವಿ 2 ಸೇರಿ ಮಲಯಾಳಂನಲ್ಲೂ ನಟಿಸುತ್ತಿದ್ದಾರೆ. ಹೀಗೆ ಕಳೆದ 7-8 ವರ್ಷಗಳಿಂದ ಪರಭಾಷೆಗಳಲ್ಲೇ ಬಿಜಿಯಾಗಿದ್ದ ಅಶ್ವಿನಿ, ಇದೀಗ ರಿಪ್ಪನ್​ ಸ್ವಾಮಿ ಮೂಲಕ ಸ್ಯಾಂಡಲ್​ವುಡ್​ಗೆ ಕಮ್​ಬ್ಯಾಕ್​ ಆಗಿದ್ದಾರೆ.

ಕಿಶೋರ್ ಮೂಡುಬಿದ್ರೆ ನಿರ್ದೇಶನದ ಈ ಚಿತ್ರ ಪಂಚಾಂನನ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿದೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಪೋಷಕ ಪಾತ್ರದಲ್ಲಿ ಪ್ರಕಾಶ್ ತೂಮಿನಾಡ್, ವಜ್ರಧೀರ್ ಜೈನ್, ಯಮುನಾ ಶ್ರೀನಿಧಿ, ಮೋಹನ್ ಶೇಣಿ ಮತ್ತು ಕೃಷ್ಣ ಮೂರ್ತಿ ಕವತಾರ್ ಕಾಣಿಸಿಕೊಂಡಿದ್ದಾರೆ.

ಚಿತ್ರದ ಚಿತ್ರೀಕರಣವು ಕೊಪ್ಪಳ, ಕಳಸ ಮತ್ತು ಬಾಳೆಹೊನ್ನೂರಿನಲ್ಲಿ 48 ದಿನಗಳಲ್ಲಿ ಪೂರ್ಣಗೊಳಿಸಿದ್ದು, ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುಯೆಲ್ ಅಬಿ ಸಂಗೀತ ಸಂಯೋಜಿಸಿದ್ದಾರೆ. ರಂಗನಾಥ್ ಸಿಎಂ ಅವರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT