ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

A For ಆನಂದ್: ಮಕ್ಕಳ ದಿನಾಚರಣೆಯಂದು ಶಿವರಾಜ್‌ಕುಮಾರ್‌ ಹೊಸ ಸಿನಿಮಾ ಘೋಷಣೆ

ಪ್ರತಿ ಬಾರಿಯೂ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುವ ಶಿವಣ್ಣ ಅವರು ಈ ಬಾರಿ ಮೆಷ್ಟ್ರು ಆಗಿದ್ದಾರೆ.

ಸೆಂಚರಿ ಸ್ಟಾರ್‌ ಶಿವರಾಜ್‌ಕುಮಾರ್‌ ಅಭಿನಯದ ಭೈರತಿ ರಣಗಲ್ ಚಿತ್ರ ನವೆಂಬರ್ 15 ರಂದು ತೆರೆ ಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಶಿವಣ್ಣ ಅವರು ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ವಿಶೇಷ ದಿನದಂದು 'A For ಆನಂದ್' ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ.

ಪ್ರತಿ ಬಾರಿಯೂ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುವ ಶಿವಣ್ಣ ಅವರು ಈ ಬಾರಿ ಮೆಷ್ಟ್ರು ಆಗಿದ್ದಾರೆ. `ಸುಂದರ ಕಾಂಡ’ದ ಸಿನಿಮಾದಲ್ಲಿ ಟೀಚರ್ ಆಗಿ‌ ಅಭಿನಯಿಸಿದ್ದ ಶಿವಣ್ಣ ಈಗ ಬಹಳ ವರ್ಷಗಳ ನಂತರ ಮತ್ತೆ ಶಿಕ್ಷಕರಾಗುತ್ತಿದ್ದಾರೆ.

ಶ್ರೀನಿ ನಿರ್ದೇಶವದ ಈ ಎ ಫಾರ್ ಆನಂದ್, ಶಿಕ್ಷಕರು ಮತ್ತು ಅವರ ವಿದ್ಯಾರ್ಥಿಗಳ ನಡುವಿನ ಸಂಬಂಧವನ್ನು ಸಂಭ್ರಮಿಸುವ ವಿಶೇಷ ಮತ್ತು ಹೃದಯಸ್ಪರ್ಶಿ ಕೌಟುಂಬಿಕ ಮನರಂಜನೆಯ ಚಿತ್ರವಾಗಿದೆ. ಶಿವರಾಜಕುಮಾರ್ ಅವರ ಪತ್ನಿ ಗೀತಾ ಅವರ ಬ್ಯಾನರ್‌ನ ಗೀತಾ ಪಿಕ್ಚರ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಮಕ್ಕಳ ದಿನಾಚರಣೆಯ ಎ ಫಾರ್ ಆನಂದ್ ಚಿತ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಫಸ್ಟ್‌ಲುಕ್‌ನಲ್ಲಿ ಮಕ್ಕಳ ಟ್ರೈನ್‌ ಮೇಲೆ ಶಿವಣ್ಣ ಬೆತ್ತ ಹಿಡಿದು ಏನೋ ತೋರಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಪೋಸ್ಟರ್‌ ಕಂಡು ಫ್ಯಾನ್ಸ್‌ ಖುಷ್‌ ಆಗಿದ್ದಾರೆ.

ಕರ್ನಾಟಕದ ಹೃದಯ ಭಾಗದಲ್ಲಿ, ಹದಿನಾಲ್ಕು ಹಳ್ಳಿಗಳ ಕನಸುಗಳು ಒಂದೇ ಶಾಲೆಯಲ್ಲಿ ಚಿಗುರುತ್ತವೆ. ಇಲ್ಲಿ ಅಕ್ಷರದ ಅರುಣೋದಯ ‘A for Apple’ನಿಂದ ಆರಂಭವಾಗುವುದಿಲ್ಲ, ಬದಲು ಬೆಳಕಿನ ಬೀಜ ಬಿತ್ತಿದ ಗುರುವಿನ ಹೆಸರಿನಿಂದ ಮೊಳೆಯುತ್ತದೆ ಅದೇ A for ಆನಂದ್ ಎಂದು ಪೋಸ್ಟರ್‌‌ ಜತೆ ಕ್ಯಾಪ್ಷನ್‌‌ ಕೊಟ್ಟಿದ್ದಾರೆ.

ಆನಂದ್ ಕೇವಲ ಶಿಕ್ಷಕರಲ್ಲ; ಅವರು ತನ್ನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ಮತ್ತು ಸ್ನೇಹಿತ. ಈ ಚಿತ್ರವು ನಂಬಿಕೆ, ಗೌರವದ ಪ್ರಾಮುಖ್ಯತೆ ಮತ್ತು ಮಕ್ಕಳ ಜೀವನದ ಮೇಲೆ ಶಿಕ್ಷಕರು ಬೀರಬಹುದಾದ ಶಾಶ್ವತ ಪ್ರಭಾವವನ್ನು ಎತ್ತಿ ತೋರಿಸುತ್ತದೆ. ಎ ಫಾರ್ ಆನಂದ್ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ರಂಜಿಸುವ ಚಿತ್ರವಾಗಿದೆ ಎಂದು ಚಿತ್ರ ನಿರ್ಮಾಪಕರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

SCROLL FOR NEXT