ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 
ಸಿನಿಮಾ ಸುದ್ದಿ

ಕಡಿಮೆಯಾಯ್ತಾ ದರ್ಶನ್ ಕ್ರೇಜ್?: 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ರೀ-ರಿಲೀಸ್‌, ಚಿತ್ರಮಂದಿರಗಳು ಖಾಲಿ-ಖಾಲಿ!

ದರ್ಶನ್ ಸಿನಿಮಾವನ್ನು ಮುಂಜಾನೆ 6ಕ್ಕೆ ಶೋ ಇಟ್ಟಿದ್ದರು. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ನೂರು ಜನ ಕೂಡ ಇರಲಿಲ್ಲ. ಚಿತ್ರಮಂದಿರ ಖಾಲಿ ಖಾಲಿ ಆಗಿತ್ತು. ಇದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 130ಕ್ಕೂ ದಿನಗಳ ಜೈಲು ವಾಸದ ಬಳಿಕ ಇದೀಗ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದಾರೆ. ಇನ್ನು ಕೆಲ ನಿರ್ಮಾಪಕರು ದರ್ಶನ್ ಅಭಿನಯದ ಕರಿಯಾ, ನನ್ನ ಪ್ರೀತಿಯ ರಾಮು, ನವಗ್ರಹ ಚಿತ್ರಗಳು ಬಿಡುಗಡೆಯಾಗಿದ್ದವು. ಇದೀಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ರೀ ರಿಲೀಸ್ ಮಾಡಲಾಗಿದೆ. ಆದರೆ ಚಿತ್ರಮಂದಿರಗಳು ಖಾಲಿ ಖಾಲಿಯಾಗಿದ್ದು ದರ್ಶನ್ ಕ್ರೇಜ್ ಕಡಿಮೆ ಆಯ್ತ ಎಂಬ ಅನುಮಾನ ಮೂಡಿಸಿವೆ.

ಹೊಸ ಸಿನಿಮಾಗಳನ್ನು ಬೆಳಗ್ಗೆ 10ಕ್ಕೆ ರಿಲೀಸ್ ಮಾಡಲಾಗುತ್ತದೆ. ಆದರೆ ದರ್ಶನ್ ಸಿನಿಮಾವನ್ನು ಮುಂಜಾನೆ 6ಕ್ಕೆ ಶೋ ಇಟ್ಟಿದ್ದರು. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ನೂರು ಜನ ಕೂಡ ಇರಲಿಲ್ಲ. ಚಿತ್ರಮಂದಿರ ಖಾಲಿ ಖಾಲಿ ಆಗಿತ್ತು. ಇದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ದರ್ಶನ್ ಸಿನಿಮಾಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇಷ್ಟು ಬೇಗ ದರ್ಶನ್ ಕ್ರೇಜ್ ಕಡಿಮೆ ಆಯ್ತಾ ಎನ್ನುವ ಅನುಮಾನ ಮೂಡಿದೆ.

ಎರಡು ವಾರಗಳ ಹಿಂದೆ ನವಗ್ರಹ ಚಿತ್ರ ರೀ-ರಿಲೀಸ್ ಆಗಿತ್ತು. ಆ ಚಿತ್ರ ಒಂದು ವಾರದಲ್ಲೇ ಒಂದು ಕೋಟಿ ಕಲೆಕ್ಷನ್ ಮಾಡಿತ್ತು. ಆದರೆ ರಾಯಣ್ಣನ ಕಲೆಕ್ಷನ್ ಮೊದಲ ಶೋನಲ್ಲಿ 10 ಸಾವಿರ ರುಪಾಯಿ ದಾಟಿಲ್ಲ. ಹೀಗಾಗಿ ಚಿತ್ರದ ರಿಲೀಸ್ ಬಗ್ಗೆ ಪ್ರಚಾರ ಮಾಡದೇ ಬಿಡುಗಡೆ ಮಾಡಿ ದರ್ಶನ್ ಗೆ ಅವಮಾನ ಮಾಡಿದ್ದಾರೆ ಎಂಬುದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT