ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 
ಸಿನಿಮಾ ಸುದ್ದಿ

ಕಡಿಮೆಯಾಯ್ತಾ ದರ್ಶನ್ ಕ್ರೇಜ್?: 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ರೀ-ರಿಲೀಸ್‌, ಚಿತ್ರಮಂದಿರಗಳು ಖಾಲಿ-ಖಾಲಿ!

ದರ್ಶನ್ ಸಿನಿಮಾವನ್ನು ಮುಂಜಾನೆ 6ಕ್ಕೆ ಶೋ ಇಟ್ಟಿದ್ದರು. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ನೂರು ಜನ ಕೂಡ ಇರಲಿಲ್ಲ. ಚಿತ್ರಮಂದಿರ ಖಾಲಿ ಖಾಲಿ ಆಗಿತ್ತು. ಇದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 130ಕ್ಕೂ ದಿನಗಳ ಜೈಲು ವಾಸದ ಬಳಿಕ ಇದೀಗ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದಾರೆ. ಇನ್ನು ಕೆಲ ನಿರ್ಮಾಪಕರು ದರ್ಶನ್ ಅಭಿನಯದ ಕರಿಯಾ, ನನ್ನ ಪ್ರೀತಿಯ ರಾಮು, ನವಗ್ರಹ ಚಿತ್ರಗಳು ಬಿಡುಗಡೆಯಾಗಿದ್ದವು. ಇದೀಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ರೀ ರಿಲೀಸ್ ಮಾಡಲಾಗಿದೆ. ಆದರೆ ಚಿತ್ರಮಂದಿರಗಳು ಖಾಲಿ ಖಾಲಿಯಾಗಿದ್ದು ದರ್ಶನ್ ಕ್ರೇಜ್ ಕಡಿಮೆ ಆಯ್ತ ಎಂಬ ಅನುಮಾನ ಮೂಡಿಸಿವೆ.

ಹೊಸ ಸಿನಿಮಾಗಳನ್ನು ಬೆಳಗ್ಗೆ 10ಕ್ಕೆ ರಿಲೀಸ್ ಮಾಡಲಾಗುತ್ತದೆ. ಆದರೆ ದರ್ಶನ್ ಸಿನಿಮಾವನ್ನು ಮುಂಜಾನೆ 6ಕ್ಕೆ ಶೋ ಇಟ್ಟಿದ್ದರು. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ನೂರು ಜನ ಕೂಡ ಇರಲಿಲ್ಲ. ಚಿತ್ರಮಂದಿರ ಖಾಲಿ ಖಾಲಿ ಆಗಿತ್ತು. ಇದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ದರ್ಶನ್ ಸಿನಿಮಾಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇಷ್ಟು ಬೇಗ ದರ್ಶನ್ ಕ್ರೇಜ್ ಕಡಿಮೆ ಆಯ್ತಾ ಎನ್ನುವ ಅನುಮಾನ ಮೂಡಿದೆ.

ಎರಡು ವಾರಗಳ ಹಿಂದೆ ನವಗ್ರಹ ಚಿತ್ರ ರೀ-ರಿಲೀಸ್ ಆಗಿತ್ತು. ಆ ಚಿತ್ರ ಒಂದು ವಾರದಲ್ಲೇ ಒಂದು ಕೋಟಿ ಕಲೆಕ್ಷನ್ ಮಾಡಿತ್ತು. ಆದರೆ ರಾಯಣ್ಣನ ಕಲೆಕ್ಷನ್ ಮೊದಲ ಶೋನಲ್ಲಿ 10 ಸಾವಿರ ರುಪಾಯಿ ದಾಟಿಲ್ಲ. ಹೀಗಾಗಿ ಚಿತ್ರದ ರಿಲೀಸ್ ಬಗ್ಗೆ ಪ್ರಚಾರ ಮಾಡದೇ ಬಿಡುಗಡೆ ಮಾಡಿ ದರ್ಶನ್ ಗೆ ಅವಮಾನ ಮಾಡಿದ್ದಾರೆ ಎಂಬುದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT