ರಾಣಾ ದಗ್ಗುಬಾಟಿ ಮತ್ತು ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ಜೂನಿಯರ್ NTR ಬಳಿಕ Rishab Shetty ಗಾಗಿ ಕರ್ನಾಟಕಕ್ಕೆ ಬಂದ ಟಾಲಿವುಡ್ ಸ್ಟಾರ್!

ಕೆಲ ತಿಂಗಳ ಹಿಂದಷ್ಟೆ ತೆಲುಗಿನ ಸ್ಟಾರ್ ನಟ ಜೂ ಎನ್​ಟಿಆರ್, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಎನ್​ಟಿಆರ್ ಅವರನ್ನು ರಿಷಬ್ ಶೆಟ್ಟಿ ಕುಂದಾಪುರ ಇನ್ನಿತರೆ ಕಡೆಗಳಿಗೆ ಕರೆದುಕೊಂಡು ಹೋಗಿದ್ದರು.

ಪುತ್ತೂರು: ಖ್ಯಾತ ತೆಲುಗು ನಟ ರಾಣಾ ದಗ್ಗುಬಾಟಿ ಕರ್ನಾಟಕಕ್ಕೆ ಆಗಮಿಸಿ ಕನ್ನಡ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಭೇಟಿ ಮಾಡಿದ್ದಾರೆ.

ಕೆಲ ತಿಂಗಳ ಹಿಂದಷ್ಟೆ ತೆಲುಗಿನ ಸ್ಟಾರ್ ನಟ ಜೂ ಎನ್​ಟಿಆರ್, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಎನ್​ಟಿಆರ್ ಅವರನ್ನು ರಿಷಬ್ ಶೆಟ್ಟಿ ಕುಂದಾಪುರ ಇನ್ನಿತರೆ ಕಡೆಗಳಿಗೆ ಕರೆದುಕೊಂಡು ಹೋಗಿದ್ದರು.

ಕೆಲವು ದೇವಾಲಯಗಳ ಭೇಟಿ ಮಾಡಿಸಿದ್ದರು. ಈಗ ತೆಲುಗಿನ ಮತ್ತೊಬ್ಬ ಸ್ಟಾರ್ ನಟ ರಿಷಬ್ ಶೆಟ್ಟಿಗಾಗಿ ಕರ್ನಾಟಕಕ್ಕೆ ಬಂದಿದ್ದಾರೆ.

ತೆಲುಗು ಮಾತ್ರವೇ ಅಲ್ಲದೆ ಬಾಲಿವುಡ್​ನಲ್ಲಿಯೂ ಹೆಸರು ಮಾಡಿರುವ ನಟ, ನಿರ್ಮಾಪಕ, ವಿತರಕ ರಾಣಾ ದಗ್ಗುಬಾಟಿ ಕೆಲ ದಿನಗಳ ಹಿಂದೆ, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಮೂಲಗಳ ಪ್ರಕಾರ ರಾಣಾ ದಗ್ಗುಬಾಟಿ, ಒಟಿಟಿ ಶೋ ಕಾರಣಕ್ಕೆ ರಿಷಬ್ ಶೆಟ್ಟಿಯನ್ನು ಭೇಟಿ ಆಗಿದ್ದಾರೆ ಎನ್ನಲಾಗಿದೆ.

ರಾಣಾ ದಗ್ಗುಬಾಟಿ ಹೊಸದೊಂದು ಒಟಿಟಿ ಶೋ ನಿರೂಪಣೆ ಮಾಡುತ್ತಿದ್ದು, ಶೋನ ಹೋಸ್ಟ್ ಅವರೇ ಆಗಿದ್ದಾರೆ. ಈ ಶೋನಲ್ಲಿ ವಿವಿಧ ಚಿತ್ರರಂಗದ ಸ್ಟಾರ್ ನಟ, ನಟಿಯರೊಟ್ಟಿಗೆ ಆಪ್ತವಾಗಿ ಚರ್ಚೆ ಮಾಡುತ್ತಾರೆ.

ಬಹುತೇಕ ಶೋಗಳ ರೀತಿ ಸೆಟ್​ನಲ್ಲಿ ಕೂತು ಸಂದರ್ಶನಗಳನ್ನು ಮಾಡುವುದಿಲ್ಲ ರಾಣಾ ದಗ್ಗುಬಾಟಿ ಬದಲಿಗೆ ಔಟ್​ಡೋರ್​ಗೆ ಹೋಗಿ ಅಲ್ಲಿಯೇ ನಟ-ನಟಿಯರ ಸಂದರ್ಶನ ಮಾಡುತ್ತಾರೆ. ಇದೇ ಕಾರಣಕ್ಕೆ ಅವರು ರಿಷಬ್ ಶೆಟ್ಟಿಯ ಸಂದರ್ಶನ ಮಾಡಲು ಕರ್ನಾಟಕಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ರಿಷಬ್ ಶೆಟ್ಟಿ ಇದೀಗ ಕುಂದಾಪುರದ ಬಳಿ ‘ಕಾಂತಾರ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದು, ಅಲ್ಲಿಗೆ ಆಗಮಿಸಿರುವ ರಾಣಾ ದಗ್ಗುಬಾಟಿ ಕುಂದಾಪುರ ಮತ್ತಿತರೆ ಸುಂದರ ಸ್ಥಳಗಳಲ್ಲಿ ರಿಷಬ್ ಶೆಟ್ಟಿಯ ಸಂದರ್ಶನ ಮಾಡಿದ್ದಾರೆ.

ಅಂದಹಾಗೆ ರಾಣಾ ದಗ್ಗುಬಾಟಿ ಅವರ ಈ ಟಾಕ್ ಶೋ ಅಮೆಜಾನ್ ಪ್ರೈಂನಲ್ಲಿ ಪ್ರಸಾರ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT