ರಾಣಾ ದಗ್ಗುಬಾಟಿ ಮತ್ತು ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ಜೂನಿಯರ್ NTR ಬಳಿಕ Rishab Shetty ಗಾಗಿ ಕರ್ನಾಟಕಕ್ಕೆ ಬಂದ ಟಾಲಿವುಡ್ ಸ್ಟಾರ್!

ಕೆಲ ತಿಂಗಳ ಹಿಂದಷ್ಟೆ ತೆಲುಗಿನ ಸ್ಟಾರ್ ನಟ ಜೂ ಎನ್​ಟಿಆರ್, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಎನ್​ಟಿಆರ್ ಅವರನ್ನು ರಿಷಬ್ ಶೆಟ್ಟಿ ಕುಂದಾಪುರ ಇನ್ನಿತರೆ ಕಡೆಗಳಿಗೆ ಕರೆದುಕೊಂಡು ಹೋಗಿದ್ದರು.

ಪುತ್ತೂರು: ಖ್ಯಾತ ತೆಲುಗು ನಟ ರಾಣಾ ದಗ್ಗುಬಾಟಿ ಕರ್ನಾಟಕಕ್ಕೆ ಆಗಮಿಸಿ ಕನ್ನಡ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಭೇಟಿ ಮಾಡಿದ್ದಾರೆ.

ಕೆಲ ತಿಂಗಳ ಹಿಂದಷ್ಟೆ ತೆಲುಗಿನ ಸ್ಟಾರ್ ನಟ ಜೂ ಎನ್​ಟಿಆರ್, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಎನ್​ಟಿಆರ್ ಅವರನ್ನು ರಿಷಬ್ ಶೆಟ್ಟಿ ಕುಂದಾಪುರ ಇನ್ನಿತರೆ ಕಡೆಗಳಿಗೆ ಕರೆದುಕೊಂಡು ಹೋಗಿದ್ದರು.

ಕೆಲವು ದೇವಾಲಯಗಳ ಭೇಟಿ ಮಾಡಿಸಿದ್ದರು. ಈಗ ತೆಲುಗಿನ ಮತ್ತೊಬ್ಬ ಸ್ಟಾರ್ ನಟ ರಿಷಬ್ ಶೆಟ್ಟಿಗಾಗಿ ಕರ್ನಾಟಕಕ್ಕೆ ಬಂದಿದ್ದಾರೆ.

ತೆಲುಗು ಮಾತ್ರವೇ ಅಲ್ಲದೆ ಬಾಲಿವುಡ್​ನಲ್ಲಿಯೂ ಹೆಸರು ಮಾಡಿರುವ ನಟ, ನಿರ್ಮಾಪಕ, ವಿತರಕ ರಾಣಾ ದಗ್ಗುಬಾಟಿ ಕೆಲ ದಿನಗಳ ಹಿಂದೆ, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಮೂಲಗಳ ಪ್ರಕಾರ ರಾಣಾ ದಗ್ಗುಬಾಟಿ, ಒಟಿಟಿ ಶೋ ಕಾರಣಕ್ಕೆ ರಿಷಬ್ ಶೆಟ್ಟಿಯನ್ನು ಭೇಟಿ ಆಗಿದ್ದಾರೆ ಎನ್ನಲಾಗಿದೆ.

ರಾಣಾ ದಗ್ಗುಬಾಟಿ ಹೊಸದೊಂದು ಒಟಿಟಿ ಶೋ ನಿರೂಪಣೆ ಮಾಡುತ್ತಿದ್ದು, ಶೋನ ಹೋಸ್ಟ್ ಅವರೇ ಆಗಿದ್ದಾರೆ. ಈ ಶೋನಲ್ಲಿ ವಿವಿಧ ಚಿತ್ರರಂಗದ ಸ್ಟಾರ್ ನಟ, ನಟಿಯರೊಟ್ಟಿಗೆ ಆಪ್ತವಾಗಿ ಚರ್ಚೆ ಮಾಡುತ್ತಾರೆ.

ಬಹುತೇಕ ಶೋಗಳ ರೀತಿ ಸೆಟ್​ನಲ್ಲಿ ಕೂತು ಸಂದರ್ಶನಗಳನ್ನು ಮಾಡುವುದಿಲ್ಲ ರಾಣಾ ದಗ್ಗುಬಾಟಿ ಬದಲಿಗೆ ಔಟ್​ಡೋರ್​ಗೆ ಹೋಗಿ ಅಲ್ಲಿಯೇ ನಟ-ನಟಿಯರ ಸಂದರ್ಶನ ಮಾಡುತ್ತಾರೆ. ಇದೇ ಕಾರಣಕ್ಕೆ ಅವರು ರಿಷಬ್ ಶೆಟ್ಟಿಯ ಸಂದರ್ಶನ ಮಾಡಲು ಕರ್ನಾಟಕಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ರಿಷಬ್ ಶೆಟ್ಟಿ ಇದೀಗ ಕುಂದಾಪುರದ ಬಳಿ ‘ಕಾಂತಾರ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದು, ಅಲ್ಲಿಗೆ ಆಗಮಿಸಿರುವ ರಾಣಾ ದಗ್ಗುಬಾಟಿ ಕುಂದಾಪುರ ಮತ್ತಿತರೆ ಸುಂದರ ಸ್ಥಳಗಳಲ್ಲಿ ರಿಷಬ್ ಶೆಟ್ಟಿಯ ಸಂದರ್ಶನ ಮಾಡಿದ್ದಾರೆ.

ಅಂದಹಾಗೆ ರಾಣಾ ದಗ್ಗುಬಾಟಿ ಅವರ ಈ ಟಾಕ್ ಶೋ ಅಮೆಜಾನ್ ಪ್ರೈಂನಲ್ಲಿ ಪ್ರಸಾರ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT