ನಿದ್ರಾದೇವಿ Next Door TNIE
ಸಿನಿಮಾ ಸುದ್ದಿ

ಕೇವಲ ಹಣ ಖರ್ಚು ಮಾಡಿ ಸಿನಿಮಾ ಮಾಡೋದಲ್ಲ, ಪ್ಯಾಶನ್ ಆಗಬೇಕು: ಶ್ರೀಮುರಳಿ

ನಾನು ನಿದ್ರಾದೇವಿ Next Door ಚಿತ್ರವನ್ನು ನೋಡಲು ಉತ್ಸುಕನಾಗಿದ್ದೇನೆ. ಚಿತ್ರ ಪ್ರೇಕ್ಷಕರನ್ನು ರಂಜಿಸಲಿದೆ ಎಂಬ ವಿಶ್ವಾಸವಿದೆ. ಈ ತಂಡದ ಪ್ರತಿಯೊಂದು ಪ್ರಯತ್ನವು ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಅವರೆಲ್ಲರಿಗೂ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಶ್ರೀಮುರಳಿ ಹೇಳಿದ್ದಾರೆ.

ತಮ್ಮ ಚೊಚ್ಚಲ ನಿರ್ದೇಶನ ನಿದ್ರಾದೇವಿ Next Door ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿರುವ ನಿರ್ದೇಶಕ ಸುರಗ್ ಸಾಗರ್ ಅವರು ಚಿತ್ರದ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನು ಬಘೀರ ನಾಯಕ ಶ್ರೀಮುರಳಿ ಇತ್ತೀಚೆಗೆ ಟೀಸರ್ ಅನ್ನು ಬಿಡುಗಡೆ ಮಾಡಿದರು.

ಟೀಸರ್ ಬಿಡುಗಡೆ ವೇಳೆ ತಂಡದ ಪ್ರಯತ್ನವನ್ನು ಶ್ರೀಮುರಳಿ ಶ್ಲಾಘಿಸಿದ್ದು ಚಿತ್ರದ ಕುರಿತಂತೆ ಉತ್ಸುಕತೆಯನ್ನು ವ್ಯಕ್ತಪಡಿಸಿದರು. ಕೇವಲ ಹಣ ಖರ್ಚು ಮಾಡಿ ಸಿನಿಮಾ ಮಾಡೋದಲ್ಲ, ಅದು ಪ್ಯಾಶನ್ ಆಗಬೇಕು. ನಾನು ನಿದ್ರಾದೇವಿ Next Door ಚಿತ್ರವನ್ನು ನೋಡಲು ಉತ್ಸುಕನಾಗಿದ್ದೇನೆ. ಚಿತ್ರ ಪ್ರೇಕ್ಷಕರನ್ನು ರಂಜಿಸಲಿದೆ ಎಂಬ ವಿಶ್ವಾಸವಿದೆ. ಈ ತಂಡದ ಪ್ರತಿಯೊಂದು ಪ್ರಯತ್ನವು ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಅವರೆಲ್ಲರಿಗೂ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಶ್ರೀಮುರಳಿ ಹೇಳಿದ್ದಾರೆ.

ಎರಡು ವರ್ಷಗಳಿಂದ ನಿರ್ದೇಶಕ ಸುರಾಗ್ ಅವರೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ನಟ ಪ್ರವೀರ್ ಶೆಟ್ಟಿ ಹಂಚಿಕೊಂಡಿದ್ದಾರೆ. ಈ ಸಮಯದಲ್ಲಿ ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಯೋಜನೆ ಬಗ್ಗೆ ಹೆಚ್ಚಿನ ಉತ್ಸಾಹವನ್ನು ತೋರಿಸಿದ್ದು ಚಿತ್ರದಲ್ಲಿನ ಛಾಯಾಗ್ರಹಣ ಮತ್ತು ಸಂಗೀತವನ್ನು ಶ್ಲಾಘಿಸಿದರು.

ನಿದ್ರಾದೇವಿ Next Door ಟೀಸರ್ ಪೂರ್ಣ ಕಥೆಯನ್ನು ಬಹಿರಂಗಪಡಿಸದಿದ್ದರೂ, ಇದು ನಿದ್ರಾಹೀನತೆಯಿಂದ ಹೋರಾಡುವ ವ್ಯಕ್ತಿಯ ಸುತ್ತ ಸುತ್ತುವ ಆಕರ್ಷಕ ಪ್ರೇಮಕಥೆಯ ಸುಳಿವು ನೀಡುತ್ತದೆ. ಪ್ರವೀರ್ ಶೆಟ್ಟಿ ಮತ್ತು ರಿಷಿಕಾ ನಾಯಕ್ ಮುಖ್ಯ ಜೋಡಿಯಾಗಿ ನಟಿಸಿದ್ದು, ಶೈನ್ ಶೆಟ್ಟಿ, ಶ್ರುತಿ ಹರಿಹರನ್, ಹಿರಿಯ ನಟ ಕೆಎಸ್ ಶ್ರೀಧರ್ ಮತ್ತು ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತರ ಪಾತ್ರವರ್ಗಗಳಲ್ಲಿ ಶ್ರೀವತ್ಸ, ಅನೂಪ್, ಐಶ್ವರ್ಯ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದ್ದಾರೆ.

ರಾಜು ಬೋನಗಾನಿಯವರ ರೋಡಿಯಂ ಎಂಟರ್‌ಟೈನ್‌ಮೆಂಟ್ ಸಹಯೋಗದಲ್ಲಿ ಸೂರಂ ಮೂವೀಸ್ ಬ್ಯಾನರ್‌ನಡಿಯಲ್ಲಿ ಜಯರಾಮ್ ದೇವಸಮುದ್ರ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ನಕುಲ್ ಅಭ್ಯಂಕರ್ ಅವರ ಸಂಗೀತ ಮತ್ತು ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT