ಮ್ಯಾಕ್ಸ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

Kiccha Sudeep ಅಭಿಮಾನಿಗಳಿಗೆ ಸಿಹಿಸುದ್ದಿ; Max Movie ಬಿಡುಗಡೆ ದಿನಾಂಕ ಕೊನೆಗೂ ಔಟ್!

ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ನಿರ್ಮಾಪಕರು ಗುಡ್​ ನ್ಯೂಸ್​ ನೀಡಿದ್ದು, ‘ಸರೆಗಮ ಕನ್ನಡ’ ಯೂಟ್ಯೂಬ್​​ನಲ್ಲಿ ಟೀಸರ್​ ಬಿಡುಗಡೆ ಮಾಡುವ ಮೂಲಕ ರಿಲೀಸ್​ ಡೇಟ್​ ಬಗ್ಗೆ ಅಪ್​ಡೇಟ್​ ನೀಡಲಾಗಿದೆ.

ಬೆಂಗಳೂರು: ನಟ ಕಿಚ್ಚಾ ಸುದೀಪ್ ಅಭಿಮಾನಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಬಹು ನಿರೀಕ್ಷಿತ ಮ್ಯಾಕ್ಸ್ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆಯಾಗಿದೆ.

ಹೌದು.. ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ನಿರ್ಮಾಪಕರು ಗುಡ್​ ನ್ಯೂಸ್​ ನೀಡಿದ್ದು, ‘ಸರೆಗಮ ಕನ್ನಡ’ ಯೂಟ್ಯೂಬ್​​ನಲ್ಲಿ ಟೀಸರ್​ ಬಿಡುಗಡೆ ಮಾಡುವ ಮೂಲಕ ರಿಲೀಸ್​ ಡೇಟ್​ ಬಗ್ಗೆ ಅಪ್​ಡೇಟ್​ ನೀಡಲಾಗಿದೆ.

ಸುದೀಪ್ ಅಭಿನಯದ ಈ ಸಿನಿಮಾಗಾಗಿ ಅಭಿಮಾನಿಗಳು ಹಲವು ತಿಂಗಳಿನಿಂದ ಕಾಯುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಸುದೀಪ್​ ಅವರು ‘ಮ್ಯಾಕ್ಸ್​’ ಸಿನಿಮಾದಲ್ಲಿ ತುಂಬ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ನವೆಂಬರ್​ 27ರಂದು ‘ಮ್ಯಾಕ್ಸ್​’ ಸಿನಿಮಾ ಬಗ್ಗೆ ದೊಡ್ಡ ಅನೌನ್ಸ್​ಮೆಂಟ್​ ಆಗಲಿದೆ ಎಂದು ನಿರ್ಮಾಪಕರು ಇತ್ತೀಚೆಗೆ ತಿಳಿಸಿದ್ದರು. ಅದರಂತೆ, ಇಂದು ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಚಿತ್ರತಂಡ ಹೇಳಿಕೊಂಡಿರುವಂತೆ ಡಿಸೆಂಬರ್​ 25ಕ್ಕೆ ಮ್ಯಾಕ್ಸ್ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರದಲ್ಲಿ ಸಂಯುಕ್ತಾ ಹೊರನಾಡು, ಪ್ರಮೋದ್​ ಶೆಟ್ಟಿ, ವರಲಕ್ಷ್ಮಿ ಶರತ್​ಕುಮಾರ್​, ಸುನಿಲ್ ಮುಂತಾದವರು ಪ್ರಮುಖ ಪಾತ್ರವರ್ಗದಲ್ಲಿ ಇದ್ದಾರೆ. ಸುದೀಪ್​ ಅವರು ಸಿಕ್ಕಾಪಟ್ಟೆ ಮಾಸ್ ಪಾತ್ರವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​ಗಳು ಧೂಳೆಬ್ಬಿಸಿದ್ದವು. ‘ಮ್ಯಾಕ್ಸಿಮಮ್​ ಮಾಸ್​..’ ಹಾಡು ಕೂಡ ಸಖತ್​ ಸದ್ದು ಮಾಡಿದೆ.

ಮಾಸ್​ ಆಗಿ ಮೂಡಿಬಂದಿರುವ ‘ಮ್ಯಾಕ್ಸ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಅಜನೀಶ್​ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಶೇಖರ್​ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

2022ರ ಜುಲೈನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ತೆರೆಕಂಡಿತ್ತು. ಆ ಬಳಿಕ ಸುದೀಪ್​ ಅಭಿನಯದ ಯಾವುದೇ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಕಳೆದ ವರ್ಷವೇ ಬಿಡುಗಡೆ ಆಗಬೇಕಿತ್ತು. ಆದರೆ ಒಂದಷ್ಟು ಕಾರಣಗಳಿಂದಾಗಿ ಸಿನಿಮಾದ ಬಿಡುಗಡೆ ತಡವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ!

ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

ಪೂರ್ವ ಏಷ್ಯಾ ಸಂಘರ್ಷ: ಅವಾಸ್ತವಿಕ, ಅಸಮಂಜಸ..; ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆ ತಿರಸ್ಕರಿಸಿದ Iran

ಬಾಗಲಕೋಟೆ ಉಪಚುನಾವಣೆ: ಸಿದ್ದರಾಮಯ್ಯ, ವಿಜಯೇಂದ್ರಗೆ ಪ್ರತಿಷ್ಠೆಯ ಕಣ; ಭರ್ಜರಿ ಪ್ರಚಾರ!

SCROLL FOR NEXT