ನಟ ಗೋವಿಂದ 
ಸಿನಿಮಾ ಸುದ್ದಿ

ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕ ಗುಂಡೇಟು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ

ಮುಂಬಯಿ: ಶಿವಸೇನೆ ನಾಯಕ, ಬಾಲಿವುಡ್‌ ನಟ ಗೋವಿಂದ ಅವರಿಗೆ ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್‌ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ. ‘ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್​ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ವೈದ್ಯರು ಬುಲೆಟ್ ಅನ್ನು ತೆಗೆದಿದ್ದಾರೆ, ಗೋವಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದೀಗ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಸ್ಥಿತಿ ಸ್ಥಿರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT