ಮುಂಬಯಿ: ಶಿವಸೇನೆ ನಾಯಕ, ಬಾಲಿವುಡ್ ನಟ ಗೋವಿಂದ ಅವರಿಗೆ ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ ಮಿಸ್ಫೈರ್ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ. ‘ಅವರು ತಮ್ಮ ಪರವಾನಗಿ ಗನ್ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.
ವೈದ್ಯರು ಬುಲೆಟ್ ಅನ್ನು ತೆಗೆದಿದ್ದಾರೆ, ಗೋವಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದೀಗ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಸ್ಥಿತಿ ಸ್ಥಿರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.