ನಟ ಗೋವಿಂದ 
ಸಿನಿಮಾ ಸುದ್ದಿ

ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕ ಗುಂಡೇಟು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ

ಮುಂಬಯಿ: ಶಿವಸೇನೆ ನಾಯಕ, ಬಾಲಿವುಡ್‌ ನಟ ಗೋವಿಂದ ಅವರಿಗೆ ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್‌ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ. ‘ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್​ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ವೈದ್ಯರು ಬುಲೆಟ್ ಅನ್ನು ತೆಗೆದಿದ್ದಾರೆ, ಗೋವಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದೀಗ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಸ್ಥಿತಿ ಸ್ಥಿರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT