ಕಾಂತಾರ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಕಾಂತಾರ ಸಿನಿಮಾಗೆ 2 ವರ್ಷಗಳ ಸಂಭ್ರಮ: ಕುತೂಹಲ ಹೆಚ್ಚಿಸಿದ ಪ್ರೀಕ್ವೆಲ್

ಪ್ರಶಸ್ತಿಗಳು ಅದರ ಸಾಧನೆಗಳಿಗೆ ಕಿರೀಟವನ್ನು ನೀಡುತ್ತದೆ. ಕಾಂತಾರ ಸಿನಿಮಾಗೆ ಪುರಸ್ಕಾರಗಳ ಮಹಾಪೂರವೇ ಹರಿದುಬರುತ್ತಿದ್ದು, ಅಕ್ಟೋಬರ್ 8ರಂದು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ತಂಡ ಸಜ್ಜಾಗಿದೆ.

ರಿಷಬ್ ಶೆಟ್ಟಿ ಕಾಂತಾರ ಚಿತ್ರವು ಕನ್ನಡ ಪ್ರೇಕ್ಷಕರನ್ನು ಮೋಡಿಮಾಡಿದ್ದು ಮಾತ್ರವಲ್ಲದೆ ಬಹು ಭಾಷೆಗಳಲ್ಲಿ ಸಿನಿಮಾ ಪ್ರಿಯರನ್ನು ರಂಜಿಸುವುದರ ಜೊತೆಗೆ ಬ್ಲಾಕ್ ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿದೆ. ಕೇವಲ 16 ಕೋಟಿಗಳ ಸಾಧಾರಣ ಬಜೆಟ್‌ನಲ್ಲಿ ತಯಾರಾದ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 460 ಕೋಟಿ ಕಲೆಕ್ಷನ್ ಮಾಡಿದೆ.

ಕಾಂತಾರ ಸಿನಿಮಾ ಬಿಡುಗಡೆಯಾಗಿ ಸೆಪ್ಟೆಂಬರ್ 30 ರಂದು ತನ್ನ ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ, ಇದೇ ವೇಳೆ ಹೊಂಬಾಳೆ ಫಿಲಂಸ್‌ ನಿರ್ಮಾಪಕ ವಿಜಯ್ ಕಿರಗಂದೂರು ಈ ಅಸಾಮಾನ್ಯ ಪ್ರಯಾಣದ ಬಗ್ಗೆ ಹಂಚಿಕೊಂಡಿದ್ದಾರೆ. ನಮ್ಮ ಹೃದಯಕ್ಕೆ ಹತ್ತಿರವಾದ ವಿಶೇಷ ಚಲನಚಿತ್ರ. ಅದನ್ನು ದೈವಿಕ ವಿದ್ಯಮಾನವಾಗಿ ಪರಿವರ್ತಿಸಿದ ಅದ್ಭುತ ಪ್ರೇಕ್ಷಕರಿಗೆ ನಮ್ಮ ತುಂಬು ಹೃದಯದ ಕೃತಜ್ಞತೆಗಳು ಎಂದಿದ್ದಾರೆ. ಚಿತ್ರದ ಯಶಸ್ಸನ್ನು ಅಂಕಿಅಂಶಗಳು ಮಾತ್ರವಲ್ಲದೆ ಅದು ಪಡೆದ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯಲ್ಲಿ ಅಳೆಯಲಾಗುತ್ತದೆ, ಪ್ರಶಸ್ತಿಗಳು ಅದರ ಸಾಧನೆಗಳಿಗೆ ಕಿರೀಟವನ್ನು ನೀಡುತ್ತದೆ. ಕಾಂತಾರ ಸಿನಿಮಾಗೆ ಪುರಸ್ಕಾರಗಳ ಮಹಾಪೂರವೇ ಹರಿದುಬರುತ್ತಿದ್ದು, ಅಕ್ಟೋಬರ್ 8ರಂದು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ತಂಡ ಸಜ್ಜಾಗಿದೆ.

ಆದರೆ ಉತ್ಸಾಹ ಅಲ್ಲಿಗೆ ಮುಗಿಯುವುದಿಲ್ಲ. ಈ ಮಹಾಕಾವ್ಯದ ಮುಂದಿನ ಅಧ್ಯಾಯದ ತಯಾರಿಕೆಯಲ್ಲಿ ಅರ್ಧದಾರಿಯಲ್ಲೇ ಇದ್ದೇವೆ ಎಂದು ಹಂಚಿಕೊಳ್ಳಲು ನಿರ್ಮಾಣ ಸಂಸ್ಥೆ ಥ್ರಿಲ್ ಆಗಿದೆ. "ಈ ದಂತಕತೆಯ ಮುಂದಿನ ಅಧ್ಯಾಯವನ್ನು ಪ್ರಾರಂಭಿಸಲು ನಾವು ಉತ್ಸುಕರಾಗಿದ್ದೇವೆ, ಕಾಂತಾರ ಅಧ್ಯಾಯ 1 ಶೀಘ್ರದಲ್ಲೇ ನಿಮ್ಮೆಲ್ಲರ ಮುಂದೆ ತರುತ್ತೇವೆ ಎಂದಿದ್ದಾರೆ. ಕಾಂತಾರ ಚಿತ್ರವನ್ನು ನಿರ್ದೇಶಿಸಿದ, ಸಹ-ಕಥೆಗಾರ ಮತ್ತು ನಟಿಸಿದ ರಿಷಬ್ ಶೆಟ್ಟಿ ಪ್ರಸ್ತುತ ಚಿತ್ರದ ಪೂರ್ವಭಾಗದ ಮೇಲೆ ಕೇಂದ್ರೀಕರಿಸಿದ್ದಾರೆ. 2025 ರಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ, ರಿಷಬ್ ಬಿಗಿಯಾದದ ಕಥೆ ಬೆಯಲು ಸಮಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಕಾಂತಾರ ಯಶಸ್ಸಿನಿಂದಾಗಿ ಪ್ರೀಕ್ವೆಲ್ ಗಾಗಿ ಅಭಿಮಾನಿಗಳು ತೀವ್ರ ಕುತೂಹದಿಂದ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT