ಕೆಜಿಎಫ್ ಚಿತ್ರ 
ಸಿನಿಮಾ ಸುದ್ದಿ

ಹೊಂಬಾಳೆ ಸಂಸ್ಥೆಗೆ 4 ರಾಷ್ಟ್ರ ಪ್ರಶಸ್ತಿ; '4 ತಿಂಗಳಲ್ಲಿ ಕೆಜಿಎಫ್-3 ಬಗ್ಗೆ ಅಪ್ಡೇಟ್' ಎಂದ ನಿರ್ಮಾಪಕ Vijay kiragandur

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಕನ್ನಡದ ಹಲವು ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ. ಈ ಪೈಕಿ ಹೊಂಬಾಳೆ ಸಂಸ್ಥೆ ನಿರ್ಮಿಸಿದ್ದ ಕೆಜಿಎಫ್-2 ಮತ್ತು ಕಾಂತಾರ ಚಿತ್ರಗಳಿಗೆ ಪ್ರಶಸ್ತಿ ಒಲಿದುಬಂದಿದೆ.

ನವದೆಹಲಿ: 'ಕೆಜಿಎಫ್​: ಚಾಪ್ಟರ್​ 2’ ಮತ್ತು ‘ಕಾಂತಾರ’ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿದ್ದು, ಇದರ ಬೆನ್ನಲ್ಲೇ ನಿರ್ಮಾಪಕ ವಿಜಯ್ ಕಿರಗಂದೂರು ಕೆಜಿಎಫ್-3 ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಹೌದು.. 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಕನ್ನಡದ ಹಲವು ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ.

ಈ ಪೈಕಿ ಹೊಂಬಾಳೆ ಸಂಸ್ಥೆ ನಿರ್ಮಿಸಿದ್ದ ಕೆಜಿಎಫ್-2 ಮತ್ತು ಕಾಂತಾರ ಚಿತ್ರಗಳಿಗೆ ಪ್ರಶಸ್ತಿ ಒಲಿದುಬಂದಿದೆ. ಈ ಎರಡು ಚಿತ್ರಗಳಿಂದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಒಟ್ಟು 4 ಪ್ರಶಸ್ತಿಗಳು ಸಿಕ್ಕಂತಾಗಿದೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಖುಷಿ ಹಂಚಿಕೊಂಡ ನಿರ್ಮಾಪಕ ವಿಜಯ್​ ಕಿರಗಂದೂರು, ‘ಕೆಜಿಎಫ್​ 2 ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಬಂದಿರುವುದಕ್ಕೆ ತುಂಬ ಸಂತಸ ಆಗುತ್ತಿದೆ. ಅದೇ ಸಿನಿಮಾಗೆ ಕೆಲಸ ಮಾಡಿದ ಸಾಹಸ ನಿರ್ದೇಶಕರಿಗೂ ಪ್ರಶಸ್ತಿ ಬಂದಿದೆ.

ಅದೇ ರೀತಿ ‘ಕಾಂತಾರ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪ್ರಶಸ್ತಿ ಪಡೆದಿದೆ. ಆ ಸಿನಿಮಾದಲ್ಲಿ ನಟಿಸಿದ್ದಕ್ಕೆ ರಿಷಬ್​ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಹೀಗೆ ಒಂದೇ ವರ್ಷದಲ್ಲಿ ನಮ್ಮ ಎರಡು ಸಿನಿಮಾಗಳಿಂದ 4 ಅವಾರ್ಡ್​ ಸಿಕ್ಕಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ’ ಎಂದರು.

‘ಕಾಂತಾರ ಮತ್ತು ಕೆಜಿಎಫ್​ 2 ಚಿತ್ರತಂಡದ ಎಲ್ಲರಿಗೂ ಇಲ್ಲಿಂದಲೇ ನಾನು ಸಂತಸ ಹಂಚಲು ಇಷ್ಟಪಡುತ್ತೇನೆ. ಈ ಸಿನಿಮಾಗಳನ್ನು ಪ್ರೋತ್ಸಾಹಿಸಿದ ಕನ್ನಡಿಗರು ಮತ್ತು ಇಡೀ ಭಾರತದ ಪ್ರೇಕ್ಷಕರಿಗೆ ನಾನು ಕೃತಜ್ಞತೆ ಸಲ್ಲಿಸಿತ್ತೇನೆ. ರಾಷ್ಟ್ರ ಪಶಸ್ತಿ ಪಡೆದ ಎಲ್ಲ ಕನ್ನಡಿಗರಿಗೂ ಅಭಿನಂದನೆಗಳು’ ಎಂದು ಹೇಳಿದರು.

ಖುಷಿ ಸಂದರ್ಭದಲ್ಲಿ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಇದೇ ವೇಳೆ ಕೆಜಿಎಫ್-3 ಬಗ್ಗೆಯೂ ಮಾತನಾಡಿದ ನಿರ್ಮಾಪಕ ವಿಜಯ್ ಕಿರಗಂದೂರು, '‘ಇನ್ನೇನು 4-5 ತಿಂಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 3’ ಚಿತ್ರದ ಬಗ್ಗೆ ಅಪ್​ಡೇಟ್​ ನೀಡುತ್ತೇವೆ. ‘ಕಾಂತಾರ 2’ ಸಿನಿಮಾಗೆ ತುಂಬ ಚೆನ್ನಾಗಿ ಶೂಟಿಂಗ್​ ಆಗುತ್ತಿದೆ. ರಿಷಬ್​ ಅವರು ನಟನೆ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಇಡೀ ತಂಡ ಕುಂದಾಪುರದಲ್ಲಿ ಕಷ್ಟಪಡುತ್ತಿದೆ. ಮುಂದಿನ ಆಗಸ್ಟ್​ನಲ್ಲಿ ನೀವು ಕಾಂತಾರ-2 ಸಿನಿಮಾವನ್ನು ನಿರೀಕ್ಷಿಸಬಹುದು’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT