ಕೆಜಿಎಫ್ ಚಿತ್ರ 
ಸಿನಿಮಾ ಸುದ್ದಿ

ಹೊಂಬಾಳೆ ಸಂಸ್ಥೆಗೆ 4 ರಾಷ್ಟ್ರ ಪ್ರಶಸ್ತಿ; '4 ತಿಂಗಳಲ್ಲಿ ಕೆಜಿಎಫ್-3 ಬಗ್ಗೆ ಅಪ್ಡೇಟ್' ಎಂದ ನಿರ್ಮಾಪಕ Vijay kiragandur

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಕನ್ನಡದ ಹಲವು ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ. ಈ ಪೈಕಿ ಹೊಂಬಾಳೆ ಸಂಸ್ಥೆ ನಿರ್ಮಿಸಿದ್ದ ಕೆಜಿಎಫ್-2 ಮತ್ತು ಕಾಂತಾರ ಚಿತ್ರಗಳಿಗೆ ಪ್ರಶಸ್ತಿ ಒಲಿದುಬಂದಿದೆ.

ನವದೆಹಲಿ: 'ಕೆಜಿಎಫ್​: ಚಾಪ್ಟರ್​ 2’ ಮತ್ತು ‘ಕಾಂತಾರ’ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿದ್ದು, ಇದರ ಬೆನ್ನಲ್ಲೇ ನಿರ್ಮಾಪಕ ವಿಜಯ್ ಕಿರಗಂದೂರು ಕೆಜಿಎಫ್-3 ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಹೌದು.. 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಕನ್ನಡದ ಹಲವು ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ.

ಈ ಪೈಕಿ ಹೊಂಬಾಳೆ ಸಂಸ್ಥೆ ನಿರ್ಮಿಸಿದ್ದ ಕೆಜಿಎಫ್-2 ಮತ್ತು ಕಾಂತಾರ ಚಿತ್ರಗಳಿಗೆ ಪ್ರಶಸ್ತಿ ಒಲಿದುಬಂದಿದೆ. ಈ ಎರಡು ಚಿತ್ರಗಳಿಂದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಒಟ್ಟು 4 ಪ್ರಶಸ್ತಿಗಳು ಸಿಕ್ಕಂತಾಗಿದೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಖುಷಿ ಹಂಚಿಕೊಂಡ ನಿರ್ಮಾಪಕ ವಿಜಯ್​ ಕಿರಗಂದೂರು, ‘ಕೆಜಿಎಫ್​ 2 ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಬಂದಿರುವುದಕ್ಕೆ ತುಂಬ ಸಂತಸ ಆಗುತ್ತಿದೆ. ಅದೇ ಸಿನಿಮಾಗೆ ಕೆಲಸ ಮಾಡಿದ ಸಾಹಸ ನಿರ್ದೇಶಕರಿಗೂ ಪ್ರಶಸ್ತಿ ಬಂದಿದೆ.

ಅದೇ ರೀತಿ ‘ಕಾಂತಾರ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪ್ರಶಸ್ತಿ ಪಡೆದಿದೆ. ಆ ಸಿನಿಮಾದಲ್ಲಿ ನಟಿಸಿದ್ದಕ್ಕೆ ರಿಷಬ್​ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಹೀಗೆ ಒಂದೇ ವರ್ಷದಲ್ಲಿ ನಮ್ಮ ಎರಡು ಸಿನಿಮಾಗಳಿಂದ 4 ಅವಾರ್ಡ್​ ಸಿಕ್ಕಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ’ ಎಂದರು.

‘ಕಾಂತಾರ ಮತ್ತು ಕೆಜಿಎಫ್​ 2 ಚಿತ್ರತಂಡದ ಎಲ್ಲರಿಗೂ ಇಲ್ಲಿಂದಲೇ ನಾನು ಸಂತಸ ಹಂಚಲು ಇಷ್ಟಪಡುತ್ತೇನೆ. ಈ ಸಿನಿಮಾಗಳನ್ನು ಪ್ರೋತ್ಸಾಹಿಸಿದ ಕನ್ನಡಿಗರು ಮತ್ತು ಇಡೀ ಭಾರತದ ಪ್ರೇಕ್ಷಕರಿಗೆ ನಾನು ಕೃತಜ್ಞತೆ ಸಲ್ಲಿಸಿತ್ತೇನೆ. ರಾಷ್ಟ್ರ ಪಶಸ್ತಿ ಪಡೆದ ಎಲ್ಲ ಕನ್ನಡಿಗರಿಗೂ ಅಭಿನಂದನೆಗಳು’ ಎಂದು ಹೇಳಿದರು.

ಖುಷಿ ಸಂದರ್ಭದಲ್ಲಿ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಇದೇ ವೇಳೆ ಕೆಜಿಎಫ್-3 ಬಗ್ಗೆಯೂ ಮಾತನಾಡಿದ ನಿರ್ಮಾಪಕ ವಿಜಯ್ ಕಿರಗಂದೂರು, '‘ಇನ್ನೇನು 4-5 ತಿಂಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 3’ ಚಿತ್ರದ ಬಗ್ಗೆ ಅಪ್​ಡೇಟ್​ ನೀಡುತ್ತೇವೆ. ‘ಕಾಂತಾರ 2’ ಸಿನಿಮಾಗೆ ತುಂಬ ಚೆನ್ನಾಗಿ ಶೂಟಿಂಗ್​ ಆಗುತ್ತಿದೆ. ರಿಷಬ್​ ಅವರು ನಟನೆ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಇಡೀ ತಂಡ ಕುಂದಾಪುರದಲ್ಲಿ ಕಷ್ಟಪಡುತ್ತಿದೆ. ಮುಂದಿನ ಆಗಸ್ಟ್​ನಲ್ಲಿ ನೀವು ಕಾಂತಾರ-2 ಸಿನಿಮಾವನ್ನು ನಿರೀಕ್ಷಿಸಬಹುದು’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT