ಅಭಿಮನ್ಯು ಕಾಶಿನಾಥ್, ಸ್ಪಂದನ ಉಡಿಮನೆ 
ಸಿನಿಮಾ ಸುದ್ದಿ

ʼಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾ ಅಕ್ಟೋಬರ್'ನಲ್ಲಿ ತೆರೆಗೆ

ಲವ್ ಕಂ ಥ್ರಿಲ್ಲರ್ ಆಗಿರುವ ಈ ಚಿತ್ರವು. ವೀಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುವ ಭರವಸೆ ಇದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಮುಖ್ಯ ಭೂಮಿಕೆಯಲ್ಲಿರುವ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಅಕ್ಟೋಬರ್ 25 ರಂದು ಬಿಡುಗಡೆಯಾಗಲಿದೆ.

ಚಿತ್ರದ ಈಗಾಗಲೇ ವಿವಿಧ ರೀತಿಯಲ್ಲಿ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದಂತೆ ಪ್ರಚಾರ ಕಾರ್ಯಗಳು ಭರದಿಂದ ಸಾಗಿವೆ.

ಸುದರ್ಶನ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಜತಿನ್ ಪಟೇಲ್ ನಿರ್ಮಿಸಿದ ಈ ಚಿತ್ರವನ್ನು ಕಿರಣ್ ಎಸ್ ಸೂರ್ಯ ನಿರ್ದೇಶಿಸಿದ್ದಾರೆ. ಕಿರಣ್ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಕೂಡ ಬರೆದಿದ್ದಾರೆ.

ಇದೊಂದು ಲವ್‌ ಕಂ ಥ್ರಿಲ್ಲರ್‌ ಜಾನರಿನ ಚಿತ್ರ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ. ಶೀರ್ಷಿಕೆ ಸೂಚಿಸುವಂತೆ, ಕಿರಣ್‌ ಅವರ ಈ ಹೊಸ ಪ್ರಯತ್ನ ಸಾಂಪ್ರದಾಯಿಕ ಗಡಿಗಳನ್ನು ಧಿಕ್ಕರಿಸುವ ಗುರಿಯನ್ನು ಹೊಂದಿದೆ. ಲವ್ ಕಂ ಥ್ರಿಲ್ಲರ್ ಆಗಿರುವ ಈ ಚಿತ್ರವು. ವೀಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುವ ಭರವಸೆ ಇದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಪಂದನ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT