ಯುವರಾಜ್ ಕುಮಾರ್ 
ಸಿನಿಮಾ ಸುದ್ದಿ

PRK-KRG ಸಹಯೋಗದಲ್ಲಿ ಯುವರಾಜ್ ಕುಮಾರ್ 2ನೇ ಚಿತ್ರ?

ಪಿಅರ್'ಕೆ ಮೂಲಕ ಯುವರಾಜ್ ನ ಲಾಂಚ್ ಮಾಡುವುದಕ್ಕೆ ಪುನೀತ್ ರಾಜ್ ಕುಮಾರ್ ಪ್ಲಾನ್ ಮಾಡಿದ್ದರು. ಈಗ ಅಪ್ಪು ಆಸೆಯಂತೆ ಪಿಅರ್'ಕೆ ಯಲ್ಲಿ ಯುವರಾಜ್ ಕುಮಾರ್ ಅವರ 2ನೇ ಚಿತ್ರ ನಿರ್ಮಾಣವಾಗಲಿದೆ.

‘ಯುವ’ ಸಿನಿಮಾ ಮೂಲಕ ಬೆಳ್ಳಿತೆರೆ ಮೇಲೆ ಅಬ್ಬರಿಸಿದ್ದ ಯುವ ರಾಜ್​ಕುಮಾರ್ ಅವರು ಇದೀಗ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಅಪ್ಪು ಕನಸಿನಂತೆ ಯುವರಾಜ್ ಕುಮಾರ್ ಅವರ ಎರಡನೇ ಚಿತ್ರ ನಿರ್ಮಾಣವಾಗುತ್ತಿದೆ ಎನ್ನಲಾಗಿದೆ.

ಪಿಅರ್'ಕೆ ಮೂಲಕ ಯುವರಾಜ್ ನ ಲಾಂಚ್ ಮಾಡುವುದಕ್ಕೆ ಪುನೀತ್ ರಾಜ್ ಕುಮಾರ್ ಪ್ಲಾನ್ ಮಾಡಿದ್ದರು. ಈಗ ಅಪ್ಪು ಆಸೆಯಂತೆ ಪಿಅರ್'ಕೆ ಯಲ್ಲಿ ಯುವರಾಜ್ ಕುಮಾರ್ ಅವರ 2ನೇ ಚಿತ್ರ ನಿರ್ಮಾಣವಾಗಲಿದೆ. ಯುವ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಪಕಿಯಾಗಿದ್ದಾರೆಂದು ತಿಳಿದುಬಂದಿದೆ.

ಅಪ್ಪು ಕನಸಿಗಾಗಿ ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳು ಕೈ ಜೋಡಿಸಿವೆ. ಪಿಅರ್ ಕೆ ಜೊತೆ ಜಯಣ್ಣ ಫಿಲಂಸ್, ಕೆಅರ್ ಜಿ ಸ್ಟೂಡಿಯೋ ಸೇರಿ ಯುವ ಅವರ 2ನೇ ಸಿನಿಮಾ ನಿರ್ಮಾಣ ಮಾಡುತ್ತಿವೆ. ಮೂರು ದಿಗ್ಗಜ‌ ಸಂಸ್ಥೆಗಳ ನೇತೃತ್ವದಲ್ಲಿ ಯುವರಾಜ್ ಕುಮಾರ್ ಅವರ ಎರಡನೇ ಚಿತ್ರ ನಿರ್ಮಾಣ ಆಗುತ್ತಿದೆ.

ಈ ಸುದ್ದಿಗಳ ನಡುವಲ್ಲೇ ನಿರ್ಮಾಪಕ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಅವರು ಮಾಡಿರುವ ಪೋಸ್ಟ್ ವೊಂದು ಸಿನಿಮಾ ಕುರಿತು ಮತ್ತಷ್ಟು ಸುಳಿವುಗಳನ್ನು ನೀಡಿದೆ. “‘Back on track onto the next, a good week this is going to be!” ಎಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಯುವರಾಜ್ ಕುಮಾರ್ ಅವರ 2ನೇ ಚಿತ್ರ ಕುರಿತ ಊಹಾಪೋಹಗಳಿಗೆ ಪುಷ್ಠಿ ನೀಡಿದೆ.

ಪಿಆರ್‌ಕೆ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾದ ನಿರ್ದೇಶಕರು ಯಾರು? ಈ ಚಿತ್ರದ ಟೈಟಲ್ ಏನು? ಈ ಸಿನಿಮಾದಲ್ಲಿ ಯಾರೆಲ್ಲ ನಟರು ಹಾಗೂ ತಂತ್ರಜ್ಞರು ಇರಲಿದ್ದಾರೆ ಎಂಬ ಮಾಹಿತಿಗಾಗಿ ಕಾದು ನೋಡಬೇಕಿದೆ.

ಒಟ್ಟಾರೆ, ಯುವ ರಾಜ್​ಕುಮಾರ್ ಎರಡನೇ ಚಿತ್ರ ಪಿಆರ್​​ಕೆ ಪ್ರೊಡಕ್ಷನ್​ನಲ್ಲಿ ನಿರ್ಮಾಣ ಆಗುತ್ತಿರುವುದರಿಂದ ಕುತೂಹಲ ಹೆಚ್ಚಿದ್ದು, ಮೂರು ದಿಗ್ಗದ ಸಿನಿಮಾ ನಿರ್ಮಾಣ ಸಂಸ್ಧೆಗಳು ಚಿತ್ರದ ಕುರಿತು ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ; ಸಿಎಂ ಸಿದ್ದರಾಮಯ್ಯ

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ

ಹಣೆಯಲ್ಲಿ ತಿಲಕ, ಕೈಯಲ್ಲಿ ಕೆಂಪುದಾರ: ಪ್ರಧಾನಿ ಮೋದಿಗೆ ಜನ್ಮದಿನ ಶುಭ ಕೋರಿದ ನಟ Aamir Khan

'ಹಾಳಾದ ರಸ್ತೆಗಳು, ಗುಂಡಿಗಳು ಮತ್ತು ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರ

ACCಗೆ ಹೊಸ ತಲೆನೋವು: 'ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಅವನ ಹೆಸರು ಕೈ ಬಿಡಿ' ಎಂದು Suryakumar Yadav ಖಡಕ್ ಪಟ್ಟು!

SCROLL FOR NEXT