ವಕೀಲ ಜಗದೀಶ್ 
ಸಿನಿಮಾ ಸುದ್ದಿ

ನನ್ನ ತಪ್ಪುಗಳು ನಟನೆಯ ಒಂದು ಭಾಗ, ವೈಯಕ್ತಿಕ ದ್ವೇಷವಲ್ಲ: ಬಿಗ್​ ಬಾಸ್ ನಿಂದ ಹೊರಬಂದು ಕ್ಷಮೆ ಕೇಳಿದ ಜಗದೀಶ್

ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದಿದ್ದಾರೆ.

ಬೆಂಗಳೂರು: ಮಹಿಳೆಯರನ್ನು ನಿಂದಿಸಿದ ಕಾರಣಕ್ಕೆ ಬಿಗ್ ಬಾಸ್‌ ಕನ್ನಡದ 11ನೇ ಆವೃತ್ತಿಯಿಂದ ಗೇಟ್‌ ಪಾಸ್‌ ಪಡೆದಿರುವ ವಕೀಲ ಕೆ.ಎನ್ ಜಗದೀಶ್ ಕುಮಾರ್, ನಟ ಸುದೀ‍ಪ್ ಹಾಗೂ ಇತರ ಸ್ಪರ್ಧಿಗಳ ಕ್ಷಮೆ ಕೋರಿದ್ದಾರೆ.

ಕೆಲ ಮಾಧ್ಯಮಗಳಿಗೆ ಸಂದೇಶ ರವಾನಿಸಿರುವ ಜಗದೀಶ್, ‘ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದಿದ್ದಾರೆ. ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್​ ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ನನ್ನ ಬಳಿ ಪದಗಳು ಕಡಿಮೆ, ವಿಶ್ಲೇಷಣೆ ಮಾಡಲು’ ಎಂದು ಹೇಳಿದ್ದಾರೆ.

ಸುದೀಪ್ ಸರ್ ನನ್ನನ್ನು ಕ್ಷಮಿಸಿ. ನನ್ನ ಕ್ಷಮಾಪಣೆ ಸ್ವೀಕರಿಸಿ. ನಿಮ್ಮ ಮೇಲೆ ನನಗೆ ಪ್ರೀತಿ, ಗೌರವ ಇದೆ. ನಿಮ್ಮ ಸಲಹೆಯಿಂದ ನಾನು ತುಂಬಾ ಕಲಿತೆ. ನೀವು ನನಗೆ ಶಿಕ್ಷಕರ ಸಮಾನ. ನಾನು ಸುದೀಪ್‌ ಅವರಿಗೆ, ಬಿಗ್‌ ಬಾಸ್‌ ತಂಡಕ್ಕೆ ಆಭಾರಿಯಾಗಿರುವೆ’. ಬೆಳಿಗ್ಗೆ ಎದ್ದೇಳಲು ಹಾಕುವ ಹಾಡನ್ನು ನಾನು ಮಿಸ್‌ ಮಾಡಿಕೊಳ್ಳುತ್ತಿದ್ದೇನೆ. ಐಶ್ವರ್ಯಾ ಅವರು ನನ್ನನ್ನು ಕುಣಿಯವಂತೆ ಮಾಡಿದರು. ಅವರಿಗೆ ಧನ್ಯವಾದಗಳು. ರಂಜಿತ್, ಮಾನಸ ಹಾಗೂ ಅಲ್ಲಿರುವ ಎಲ್ಲರೂ ಸಣ್ಣ ವಯಸ್ಸಿನಲ್ಲೇ ಅದ್ಭುತ ಕಲಾವಿದರು ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. ನಾನು ಎಲ್ಲರೊಳಗೊಬ್ಬನಾಗಲು ಪ್ರಯತ್ನಪಟ್ಟೆ. ನಗಲು ಪ್ರಯತ್ನ ಪಟ್ಟೆ. ಈ ನಿಟ್ಟಿನಲ್ಲಿ ನನ್ನಿಂದ ಕೆಲವು ತಪ್ಪುಗಳಾಗಿವೆ. ಯಾವುದು ವೈಯಕ್ತಿಕವಲ್ಲ. ಅದು ಮನೋರಂಜನೆಯ ಒಂದು ಭಾಗವಾಗಿತ್ತಷ್ಟೇ ಎಂದು ಸಂದೇಶದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT