ಕೆ.ಮಂಜು ಮತ್ತು ಸ್ಮೈಲ್ ಶ್ರೀನು  
ಸಿನಿಮಾ ಸುದ್ದಿ

ಕೆ. ಮಂಜು ನಿರ್ಮಾಣದ 44ನೇ ಚಿತ್ರಕ್ಕೆ ಸ್ಮೈಲ್ ಶ್ರೀನು ಡೈರೆಕ್ಟರ್

‘ರಾಜಾಹುಲಿ’, ‘ರಾಮ ಶಾಮ ಭಾಮ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ.ಮಂಜು ಈಗ ಯುವ ನಿರ್ದೇಶಕ ಸ್ಮೈಲ್ ಶ್ರೀನು ಜೊತೆ ಕೈಜೋಡಿಸಿದ್ದಾರೆ.

ಕನ್ನಡದ ಪ್ರಸಿದ್ಧ ನಿರ್ಮಾಪಕ ಕೆ ಮಂಜು ಅವರು ತಮ್ಮ 44 ನೇ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ, ಈ ಹೊಸ ಸಿನಿಮಾಗಾಗಿ ನಿರ್ದೇಶಕ ಸ್ಮೈಲ್ ಶ್ರೀನು ಜೊತೆಗೂಡುತ್ತಿದ್ದಾರೆ.

‘ರಾಜಾಹುಲಿ’, ‘ರಾಮ ಶಾಮ ಭಾಮ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ.ಮಂಜು ಈಗ ಯುವ ನಿರ್ದೇಶಕ ಸ್ಮೈಲ್ ಶ್ರೀನು ಜೊತೆ ಕೈಜೋಡಿಸಿದ್ದಾರೆ. ‘ಸ್ಮೈಲ್ ಶ್ರೀನು, ನಾನು ಸೇರಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂಥ ಒಂದು ಸಿನಿಮಾ ಮಾಡಬೇಕೆಂದು ಬಹಳ ದಿನಗಳಿಂದ ಅಂದುಕೊಂಡಿದ್ದೆವು. ಈ ಬಗ್ಗೆ ಸಾಕಷ್ಟು ಚರ್ಚಿಸಿದ್ದೆವು. ಅದಕ್ಕೀಗ ಕಾಲ ಕೂಡಿಬಂದಿದೆ. ಇದೊಂದು ನ್ಯಾಷನಲ್ ಸಬ್ಜೆಕ್ಟ್ ಆಗಿದ್ದು, ಸಾಮಾಜಿಕ ಕಳಕಳಿ ಇರುವ, ಇಡೀ ಪ್ರಪಂಚಕ್ಕೆ ಗೊತ್ತಿರುವ ದೊಡ್ಡ ವ್ಯಕ್ತಿಯೊಬ್ಬರ ಬದುಕಿನ ನೈಜಘಟನೆ ಆಧಾರಿತ ಚಿತ್ರ. ಸದ್ಯ ಚಿತ್ರದ ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದೆ. ಇದು ಯಾರ ಕುರಿತಾದ ಚಿತ್ರ ಮತ್ತು ಕಲಾವಿದರುಗಳು ಯಾರೆಂದು ಶೀಘ್ರದಲ್ಲಿ ತಿಳಿಸುತ್ತೇವೆ’ ಎಂದಿದ್ದಾರೆ ಕೆ.ಮಂಜು.

ವಿತರಣೆಯಲ್ಲಿ ಅಪಾರ ಅನುಭವ ಹೊಂದಿರುವ ಕೆ ಮಂಜು, ತಮ್ಮ ಪಾಲುದಾರಿಕೆಯು ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ ಎಂದು ನಂಬುತ್ತಾರೆ. “ಸ್ಮೈಲ್ ಶ್ರೀನು ಜೊತೆ ಕೆಲಸ ಮಾಡುವುದು ಒಂದು ರೋಚಕ ಅವಕಾಶ. ನನ್ನ ವಿತರಣಾ ಅನುಭವದೊಂದಿಗೆ ಅವರ ಸೃಜನಶೀಲ ದೃಷ್ಟಿಕೋನವು ರಾಷ್ಟ್ರೀಯ ಮನ್ನಣೆಯನ್ನು ಸಾಧಿಸಲು ನಮಗೆ ಸಹಾಯ ಮಾಡುತ್ತದೆ, ”ಎಂದು ಅವರು ಹಂಚಿಕೊಂಡರು. ನಾನು ಈವರೆಗೆ ಗುಣಮಟ್ಟದ ಸಿನಿಮಾಗಳನ್ನೇ ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಾ ಬಂದಿರುವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಹೇಗೆ ಮಾರ್ಕೆಟಿಂಗ್ ಮಾಡಬೇಕು, ಚಿತ್ರಗಳನ್ನು ಯಾವ ರೀತಿ ಜನರಿಗೆ ತಲುಪಿಸಬೇಕು ಎಂಬುದನ್ನು ತಿಳಿದುಕೊಳ್ಳಲು ನನ್ನ ಚಿತ್ರಕ್ಕೆ ಅನುಭವಿ ನಿರ್ಮಾಪಕರು ಹಾಗೂ ಖ್ಯಾತ ವಿತರಕರೂ ಆದ ಕೆ. ಮಂಜು ಅವರು ಜೊತೆಯಾಗಿದ್ದಾರೆ. ಉಳಿದ ಮಾಹಿತಿಗಳನ್ನು ಶೀಘ್ರದಲ್ಲಿ ಹಂಚಿಕೊಳ್ಳುತ್ತೇವೆ’ ಎಂದು ಸೀನು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT