ಚಿತ್ರದ ಪೋಸ್ಟರ್ TNIE
ಸಿನಿಮಾ ಸುದ್ದಿ

ಮರಾಠಿಯ 'ಕಾಸ್ರಾ' ಕನ್ನಡ ರಿಮೇಕ್ 'ಜೈ ಕಿಸಾನ್' ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್!

ವಿದ್ಯಾವಂತ ಯುವಕನೊಬ್ಬ ಅವಶ್ಯಕತೆಯಿಂದ ಕೃಷಿಗೆ ತಿರುಗುತ್ತಾನೆ. ನಂತರ ಆತ ಕೃಷಿ ಮಾಡಿ ಗೆಲ್ಲುತ್ತಾನಾ ಎಂಬುದನ್ನು ಚಿತ್ರದ ಮೂಲಕ ಕಟ್ಟಿಕೊಡಲಾಗಿದೆ ನಿರ್ದೇಶಕ ವಿಕಾಸ್ ವಿಲಾಸ್ ಮಿಸಾಳ್ ಹೇಳುತ್ತಾರೆ.

ಮರಾಠಿಯ ಕಾಸ್ರಾ ಚಿತ್ರದ ಕನ್ನಡ ರಿಮೇಕ್ ಜೈ ಕಿಸಾನ್ ರಾಜ್ಯಾದ್ಯಂತ ನವೆಂಬರ್ 7ರಂದು ಬಿಡುಗಡೆಯಾಗುತ್ತಿದೆ. 2024ರ ಮೇನಲ್ಲಿ ಮರಾಠಿಯಲ್ಲಿ ಚಿತ್ರ ಬಿಡುಗಡೆಯಾಗಿತ್ತು. ಮಹಾರಾಷ್ಟ್ರದ ರವಿ ನಾಗ್‌ಪುರೇ ಕಥೆ ಬರೆದು ನಿರ್ಮಿಸಿದ್ದಾರೆ. ಆಧುನಿಕ ಕೃಷಿ ಪದ್ಧತಿಗಳನ್ನು ಪ್ರಚಾರ ಮಾಡುವಾಗ ರೈತರು ಎದುರಿಸುವ ಸವಾಲುಗಳನ್ನು ಚಿತ್ರಿಸಲಾಗಿದೆ.

ಇತ್ತೀಚಿನ ಮಾಧ್ಯಮ ಸಂವಾದದಲ್ಲಿ ರವಿ ನಾಗ್‌ಪುರೇ ಚಿತ್ರದ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ರೈತನೊಬ್ಬನ ಕುರಿತಾದ ಈ ಚಿತ್ರದ ಕಥೆಯು ಮನಸೆಳೆಯುವಂತಿದೆ. ಮರಾಠಿಯಲ್ಲಿ ಯಶಸ್ವಿಯಾಗಿ ಬಿಡುಗಡೆಯಾದ ನಂತರ, ಇದು ಕನ್ನಡ ಆವೃತ್ತಿಗೆ ಅರ್ಹವಾಗಿದೆ ಎಂದು ನಾನು ಭಾವಿಸಿದೆ ಎಂದು ಹೇಳಿದರು.

ರೈತರ ಹೋರಾಟಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ. ತಮ್ಮ ಹೆಣ್ಣುಮಕ್ಕಳನ್ನು ರೈತರ ಮಕ್ಕಳಿಗೆ ಮದುವೆ ಮಾಡಿಕೊಡಬಾರದು ಎಂಬ ನಂಬಿಕೆಗೆ ನಾನು ಸವಾಲು ಹಾಕುತ್ತೇನೆ. ವಿದ್ಯಾವಂತರು ಆಧುನಿಕವಾಗಿ ಕೃಷಿಯನ್ನು ಅಳವಡಿಸಿಕೊಳ್ಳಬೇಕು. ಕೃಷಿಯು ಅನೇಕ ಅವಕಾಶಗಳನ್ನು ನೀಡುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಪ್ರಮುಖವಾಗಿ ಕೇಂದ್ರಿಕರಿಸಲಾಗಿದೆ ಎಂದರು.

ವಿದ್ಯಾವಂತ ಯುವಕನೊಬ್ಬ ಅವಶ್ಯಕತೆಯಿಂದ ಕೃಷಿಗೆ ತಿರುಗುತ್ತಾನೆ. ನಂತರ ಆತ ಕೃಷಿ ಮಾಡಿ ಗೆಲ್ಲುತ್ತಾನಾ ಎಂಬುದನ್ನು ಚಿತ್ರದ ಮೂಲಕ ಕಟ್ಟಿಕೊಡಲಾಗಿದೆ ನಿರ್ದೇಶಕ ವಿಕಾಸ್ ವಿಲಾಸ್ ಮಿಸಾಳ್ ಹೇಳುತ್ತಾರೆ. ನಾಗಪುರೆಯವರ ಉದ್ದೇಶವನ್ನು ಶ್ಲಾಘಿಸಿದ ಅವರು, ರವಿ ನಾಗ್ಪುರೆ ಬರೆದ ಕಥೆಯು ಅಸಾಧಾರಣವಾಗಿದೆ. ಅದನ್ನು ನಿರ್ದೇಶಿಸುವ ಭಾಗ್ಯ ನನಗೆ ಸಿಕ್ಕಿದೆ. ನಾಯಕ ನಟರಾಗಿ ಜನಮೇಜಯ್ ತೆಲಂಗ್ ಮತ್ತು ತನ್ವಿ ಸಾವಂತ್ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ನನ್ನ ಪಾತ್ರವು ಆಧುನಿಕ ಕೃಷಿ ಪದ್ಧತಿಗಳು ಇತರರಿಗೆ ಮಾದರಿಯಾಗುತ್ತದೆ ಎಂದು ನಾಯಕ ನಟ ಜನಮೇಜಯ್ ತೆಲಂಗ್ ಹೇಳಿದರೆ, ನಟಿ ತನ್ವಿ ಸಾವಂತ್, ಚಿತ್ರದಲ್ಲಿನ ನನ್ನ ಪಾತ್ರದ ಬಗ್ಗೆ ನನಗೆ ಹೆಮ್ಮೆ ಇದೆ. ಇದು ಶಕ್ತಿಯುತ ಸಂದೇಶವನ್ನು ಹೊಂದಿದೆ ಎಂದು ನಂಬುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT