ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

55th IFFI 2024: ಪ್ರತಿಷ್ಠಿತ ಗೋವಾ ಸಿನಿಮೋತ್ಸವದಲ್ಲಿ ಕನ್ನಡದ 'ಕೆರೆಬೇಟೆ', 'ವೆಂಕ್ಯಾ' ಪ್ರದರ್ಶನ

55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ಗೋವಾದಲ್ಲಿ ನವೆಂಬರ್ 20ರಿಂದ 28ರ ತನಕ ನಡೆಯಲಿದ್ದು, ಫಿಲ್ಮ್​ ಫೆಸ್ಟಿವಲ್​ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್​​ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಕೆರೆಬೇಟೆ' ಮತ್ತು 'ವೆಂಕ್ಯಾ' ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆಯಾಗಿವೆ.

55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ಗೋವಾದಲ್ಲಿ ನವೆಂಬರ್ 20ರಿಂದ 28ರ ತನಕ ನಡೆಯಲಿದ್ದು, ಫಿಲ್ಮ್​ ಫೆಸ್ಟಿವಲ್​ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಫಿಲ್ಮ್​ ಫೆಸ್ಟಿವಲ್​ನಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದ್ದು, ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್​ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ. ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಸಿನಿಮಾ ಇದೆ.

ಗೌರಿಶಂಕರ್ ಮುಖ್ಯಭೂಮಿಕೆಯ ಮತ್ತು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಸಿನಿಮಾ ಮಾರ್ಚ್​​ ತಿಂಗಳಲ್ಲಿ ತೆರೆಕಂಡು ಯಶಸ್ವಿಯಾಗಿತ್ತು.

ಅಪ್ಪಟ ಹಳ್ಳಿ ಸೊಗಡಿನ ಕೆರೆಬೇಟೆ ಚಿತ್ರ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ತೆರೆಕಂಡಿತ್ತು. ಜನಮನ ಸಿನಿಮಾ ಸಂಸ್ಥೆಯಡಿ ಮೂಡಿಬಂದ ಈ ಸಿನಿಮಾ, ಮಲೆನಾಡಿನ ಮೀನು ಬೇಟೆ ಸಂಸ್ಕೃತಿಯನ್ನು ಒಳಗೊಂಡಿದೆ. ಗೌರಿಶಂಕರ್, ಬಿಂದು ಗೌಡ ಜೊತೆಗೆ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಹರಿಣಿ ಸೇರಿದಂತೆ ಹಲವರು ನಟಿಸಿದ್ದಾರೆ.

ಕೆರೆಬೇಟೆ ಸಿನಿಮಾದ ಜೊತೆಗೆ ಸಿನಿಮೋತ್ಸವದಲ್ಲಿ 'ವೆಂಕ್ಯಾ' ಚಿತ್ರ ಕೂಡ ಪ್ರದರ್ಶನ ಕಾಣುತ್ತಿದೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್​ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಸಾಗರ್​ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದರು.

ಉತ್ತರ ಕರ್ನಾಟಕ ಕಥೆಯಾಧಾರಿತ ವೆಂಕ್ಯಾ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡಿದ್ದಾರೆ. ಪವನ್ ಸ್ನೇಹಿತರಾದ ಅವಿನಾಶ್ ವಿ.ರೈ ಮತ್ತು ಮೋಹನ್ ಲಾಲ್ ಮೆನನ್ ಅವರ ಸಹ ನಿರ್ಮಾಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ:​​ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಉತ್ತರಾಖಂಡ ಸಿಎಂ ಶಿಫಾರಸು

ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; ಭೀಕರ ಅಪಘಾತದಲ್ಲಿ 9 ಮಂದಿ ಸಾವು

SCROLL FOR NEXT