ಸಾಯಿ ಪಲ್ಲವಿ 
ಸಿನಿಮಾ ಸುದ್ದಿ

'ಪಾಕ್‌ನಲ್ಲಿ ಭಾರತೀಯ ಸೇನೆ ಭಯೋತ್ಪಾದಕ ಗುಂಪು': ಸಾಯಿ ಪಲ್ಲವಿ ಹೇಳಿಕೆಗೆ ನೆಟ್ಟಿಗರ ಆಕ್ರೋಶ, ವಿಡಿಯೋ ನೋಡಿ!

ಇದೀಗ ಅಮರನ್ ನಟಿ ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಯಿ ಪಲ್ಲವಿ ಭಾರೀ ಟೀಕೆಗಳನ್ನು ಎದುರಿಸುತ್ತಿದ್ದಾರೆ.

ನಟಿ ಸಾಯಿ ಪಲ್ಲವಿ ಅಭಿನಯದ 'ಅಮರನ್' ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಭಾರತೀಯ ಸೇನೆಯ ರಜಪೂತ್ ರೆಜಿಮೆಂಟ್‌ನ ನಿಯೋಜಿತ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಜೀವನಾಧರಿತ ಚಿತ್ರವಾಗಿದೆ. ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ತಮ್ಮ ಶೌರ್ಯ ಪ್ರದರ್ಶಿಸಿದ್ದರು. ಇದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ರೈಫಲ್ಸ್ ಬೆಟಾಲಿಯನ್ ಅವರಿಗೆ ಅಶೋಕ ಚಕ್ರವನ್ನು ನೀಡಲಾಯಿತು. ಚಿತ್ರದಲ್ಲಿ ಮೇಜರ್ ಮುಕುಂದ್ ವರದರಾಜನ್ ಅವರ ಪತ್ನಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ.

ಇದೀಗ ಅಮರನ್ ನಟಿ ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಯಿ ಪಲ್ಲವಿ ಭಾರೀ ಟೀಕೆಗಳನ್ನು ಎದುರಿಸುತ್ತಿದ್ದಾರೆ. ನಟಿ ಸಾಯಿ ಪಲ್ಲವಿಯ ಸಂದರ್ಶನವೊಂದು ಮರುಕಳಿಸಿದ್ದು, ಅದರಲ್ಲಿ ಭಾರತೀಯ ಸೇನೆಯನ್ನು ಭಯೋತ್ಪಾದಕ ಗುಂಪಿಗೆ ಹೋಲಿಸಿದ್ದಾರೆ. ಇದರ ವಿರುದ್ಧ ನೆಟಿಜನ್‌ಗಳು ಆಕ್ರೋಶ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ. ನಿಮಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ಚರ್ಚಿಸುವುದನ್ನು ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ.

ನಿತೇಶ್ ತಿವಾರಿ ಅವರ 'ರಾಮಾಯಣ' ಚಿತ್ರದಲ್ಲಿ ಸೀತೆಯ ಪಾತ್ರವನ್ನು ನಿರ್ವಹಿಸುತ್ತಿರುವ ನಟಿ ಸಾಯಿ ಪಲ್ಲವಿ ಅವರು ಹಳೆಯ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಮತ್ತೆ ವೈರಲ್ ಆಗಿದ್ದು ಟೀಕೆಗಳನ್ನು ಎದುರಿಸುತ್ತಿದ್ದಾರೆ. ವಿಡಿಯೋದಲ್ಲಿ ಪಾಕಿಸ್ತಾನದಲ್ಲಿ ಭಾರತೀಯ ಸೇನೆಯನ್ನು "ಭಯೋತ್ಪಾದಕ ಗುಂಪು" ಎಂದು ಪರಿಗಣಿಸಲಾಗಿದೆ ಎಂದು ಅವರು ಕಾಮೆಂಟ್ ಮಾಡಿದ್ದರು. ಎರಡು ದೇಶಗಳ ನಡುವೆ ಇರುವ ವಿವಾದಾತ್ಮಕ ಗ್ರಹಿಕೆಯನ್ನು ಎತ್ತಿ ತೋರಿಸುತ್ತದೆ.

ಪಾಕಿಸ್ತಾನದ ಜನರು ನಮ್ಮ ಸೇನೆಯನ್ನು ಭಯೋತ್ಪಾದಕ ಗುಂಪು ಎಂದು ಭಾವಿಸುತ್ತಾರೆ. ನಾವು ಗುರಿ ಮಾಡುವಂತೆ ಅವರೂ ನಮ್ಮನ್ನು ಗುರಿ ಮಾಡುತ್ತಾರೆ. ಆದ್ದರಿಂದ, ದೃಷ್ಟಿಕೋನವು ಬದಲಾಗುತ್ತದೆ. ನನಗೆ ಹಿಂಸೆ ಅರ್ಥವಾಗುತ್ತಿಲ್ಲ. 2022ರಲ್ಲಿ ನಡೆದ ಸಂದರ್ಶನದಿಂದ ಈ ವಿವಾದ ಹುಟ್ಟಿಕೊಂಡಿದೆ. ವೀಡಿಯೊ ಮರುಕಳಿಸುತ್ತಿದ್ದಂತೆ, ನೆಟಿಜನ್‌ಗಳು ಅವರ ಕಾಮೆಂಟ್‌ಗಳಿಗೆ ಆಕ್ರೋಶ ಪ್ರತಿಕ್ರಿಯಿಸಿದ್ದಾರೆ ಮತ್ತು ನಟಿಯ ಕಾಮೆಂಟ್‌ಗಳನ್ನು ಖಂಡಿಸಿದ್ದಾರೆ.

ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನದ ತಮಿಳು ಚಿತ್ರ 'ಅಮರನ್' ಬಿಡುಗಡೆಗೆ ನಟಿ ಸಜ್ಜಾಗಿದ್ದಾರೆ. ಶಿವ ಆರೂರ್ ಮತ್ತು ರಾಹುಲ್ ಸಿಂಗ್ ಬರೆದಿರುವ ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್: ಟ್ರೂ ಸ್ಟೋರೀಸ್ ಆಫ್ ದಿ ಮಾಡರ್ನ್ ಮಿಲಿಟರಿಯ ರೂಪಾಂತರವಾಗಿದ್ದು, ಕಮಲ್ ಹಾಸನ್ ನಿರ್ಮಿಸಿದ್ದಾರೆ. ಶಿವಕಾರ್ತಿಕೇಯನ್ ಅಭಿನಯದ ಚಿತ್ರ ಅಕ್ಟೋಬರ್ 31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT