ಪುಷ್ಪ 2 ಹೊಸ ಫೋಸ್ಟರ್ ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ಪುಷ್ಪ 2: ದೀಪಾವಳಿ ಹಬ್ಬಕ್ಕೆ ಹೊಸ ಫೋಸ್ಟರ್ ಬಿಡುಗಡೆ, ರೊಮ್ಯಾಂಟಿಕ್ ಲುಕ್‌ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ!

ಫೋಸ್ಟರ್ ನಲ್ಲಿ ಅಲ್ಲು-ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಗಂಡ- ಹಂಡತಿ ಪಾತ್ರದಲ್ಲಿ ರೊಮ್ಯಾಂಟಿಕ್ ಲುಕ್ ನಲ್ಲಿದ್ದಾರೆ. ಪುಷ್ಪಾ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಪ್ರೀತಿಯಿಂದ ನೋಡುತ್ತಿರುವುದನ್ನು ಕಾಣಬಹುದು.

ದೀಪಾವಳಿಯ ಸಂದರ್ಭದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರು ತಮ್ಮ ಮುಂಬರುವ ಚಿತ್ರ ಪುಷ್ಪ 2: ದಿ ರೈಸ್‌ನ ಹೊಸ ಪೋಸ್ಟರ್ ಬಿಡುಗಡೆ ಮೂಲಕ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಶ್ಮೀಕಾ ಮಂದಣ್ಣ, ತಮ್ಮ ಶ್ರೀವಲ್ಲಿ ಪಾತ್ರದ ಫಸ್ಟ್ ಲುಕ್ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಫೋಸ್ಟರ್ ನಲ್ಲಿ ಅಲ್ಲು-ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಗಂಡ- ಹಂಡತಿ ಪಾತ್ರದಲ್ಲಿ ರೊಮ್ಯಾಂಟಿಕ್ ಲುಕ್ ನಲ್ಲಿದ್ದಾರೆ. ಪುಷ್ಪಾ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಪ್ರೀತಿಯಿಂದ ನೋಡುತ್ತಿರುವುದನ್ನು ಕಾಣಬಹುದು.

'ನಿಮಗೂ, ನಿಮಗೂ ಕುಟುಂಬಕ್ಕೂ ಪುಷ್ಪ ರಾಜ್, ಶ್ರೀವಲ್ಲಿಯ ದೀಪಾವಳಿ ಶುಭಾಶಯಗಳು. Pushpa2 ಇದೇ ವರ್ಷ ಡಿಸೆಂಬರ್ 5 ರಂದು ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಜ್ ಆಗಲಿದೆ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ಅಲ್ಲು ಅರ್ಜುನ್ ಕೂಡಾ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಮತ್ತು ಮುತ್ತಂಸೆಟ್ಟಿ ಮೀಡಿಯಾ ನಿರ್ಮಿಸಿರುವ ಈ ಚಿತ್ರದಲ್ಲಿ ಅಲ್ಲು, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಅವರು ಪುಷ್ಪ ರಾಜ್, ಶ್ರೀವಲ್ಲಿ ಮತ್ತು ಭನ್ವರ್ ಸಿಂಗ್ ಶೇಕಾವತ್ ಪಾತ್ರಗಳಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ನಾಯಕ ನಟ ಅಲ್ಲು ಅರ್ಜುನ್, ಪುಷ್ಪ1 ರಲ್ಲಿನ ಅಮೋಘ ಅಭಿನಯಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸುಕುಮಾರ್ ನಿರ್ದೇಶನದ ಪುಷ್ಪ2 ಚಿತ್ರವನ್ನು ಈ ಹಿಂದೆ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಬಳಿಕ ಜೂನ್ ನಲ್ಲಿ ರಿಲೀಸ್ ಎನ್ನಲಾಗಿತ್ತು. ತದನಂತರ ಡಿಸೆಂಬರ್ 6 ರಂದು ಬಿಡುಗಡೆ ಮಾಡಲಾಗುವುದು ಎಂದಿದ್ದ ನಿರ್ಮಾಪಕರು ಇದೀಗ ಇದು ಡಿಸೆಂಬರ್ 5 ರಂದು ಥಿಯೇಟರ್ ಗೆ ಬರಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT