ಪುಷ್ಪ 2 ಹೊಸ ಫೋಸ್ಟರ್ ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ಪುಷ್ಪ 2: ದೀಪಾವಳಿ ಹಬ್ಬಕ್ಕೆ ಹೊಸ ಫೋಸ್ಟರ್ ಬಿಡುಗಡೆ, ರೊಮ್ಯಾಂಟಿಕ್ ಲುಕ್‌ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ!

ಫೋಸ್ಟರ್ ನಲ್ಲಿ ಅಲ್ಲು-ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಗಂಡ- ಹಂಡತಿ ಪಾತ್ರದಲ್ಲಿ ರೊಮ್ಯಾಂಟಿಕ್ ಲುಕ್ ನಲ್ಲಿದ್ದಾರೆ. ಪುಷ್ಪಾ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಪ್ರೀತಿಯಿಂದ ನೋಡುತ್ತಿರುವುದನ್ನು ಕಾಣಬಹುದು.

ದೀಪಾವಳಿಯ ಸಂದರ್ಭದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರು ತಮ್ಮ ಮುಂಬರುವ ಚಿತ್ರ ಪುಷ್ಪ 2: ದಿ ರೈಸ್‌ನ ಹೊಸ ಪೋಸ್ಟರ್ ಬಿಡುಗಡೆ ಮೂಲಕ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಶ್ಮೀಕಾ ಮಂದಣ್ಣ, ತಮ್ಮ ಶ್ರೀವಲ್ಲಿ ಪಾತ್ರದ ಫಸ್ಟ್ ಲುಕ್ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಫೋಸ್ಟರ್ ನಲ್ಲಿ ಅಲ್ಲು-ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಗಂಡ- ಹಂಡತಿ ಪಾತ್ರದಲ್ಲಿ ರೊಮ್ಯಾಂಟಿಕ್ ಲುಕ್ ನಲ್ಲಿದ್ದಾರೆ. ಪುಷ್ಪಾ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಪ್ರೀತಿಯಿಂದ ನೋಡುತ್ತಿರುವುದನ್ನು ಕಾಣಬಹುದು.

'ನಿಮಗೂ, ನಿಮಗೂ ಕುಟುಂಬಕ್ಕೂ ಪುಷ್ಪ ರಾಜ್, ಶ್ರೀವಲ್ಲಿಯ ದೀಪಾವಳಿ ಶುಭಾಶಯಗಳು. Pushpa2 ಇದೇ ವರ್ಷ ಡಿಸೆಂಬರ್ 5 ರಂದು ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಜ್ ಆಗಲಿದೆ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ಅಲ್ಲು ಅರ್ಜುನ್ ಕೂಡಾ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಮತ್ತು ಮುತ್ತಂಸೆಟ್ಟಿ ಮೀಡಿಯಾ ನಿರ್ಮಿಸಿರುವ ಈ ಚಿತ್ರದಲ್ಲಿ ಅಲ್ಲು, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಅವರು ಪುಷ್ಪ ರಾಜ್, ಶ್ರೀವಲ್ಲಿ ಮತ್ತು ಭನ್ವರ್ ಸಿಂಗ್ ಶೇಕಾವತ್ ಪಾತ್ರಗಳಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ನಾಯಕ ನಟ ಅಲ್ಲು ಅರ್ಜುನ್, ಪುಷ್ಪ1 ರಲ್ಲಿನ ಅಮೋಘ ಅಭಿನಯಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸುಕುಮಾರ್ ನಿರ್ದೇಶನದ ಪುಷ್ಪ2 ಚಿತ್ರವನ್ನು ಈ ಹಿಂದೆ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಬಳಿಕ ಜೂನ್ ನಲ್ಲಿ ರಿಲೀಸ್ ಎನ್ನಲಾಗಿತ್ತು. ತದನಂತರ ಡಿಸೆಂಬರ್ 6 ರಂದು ಬಿಡುಗಡೆ ಮಾಡಲಾಗುವುದು ಎಂದಿದ್ದ ನಿರ್ಮಾಪಕರು ಇದೀಗ ಇದು ಡಿಸೆಂಬರ್ 5 ರಂದು ಥಿಯೇಟರ್ ಗೆ ಬರಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT